April 26, 2024

Bhavana Tv

Its Your Channel

ರಾಜ್ಯದಲ್ಲಿ ಕರೊನಾ ಪಾಲಿಗೆ ಕಾಡುತ್ತಲ್ಲೆ ಇದೆ “ಮಹಾ” ಸಂಕಷ್ಟ ; ಇಂದು ಕೂಡಾ ೭೫ ಸೊಂಕಿತರು ಪತ್ತೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಮತ್ತೆ ಹೊಸದಾಗಿ ೭೫ ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ೨೪೯೩ ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲಿಟಿನ್ ನಲ್ಲಿ ಇಂದು ರಾಜ್ಯದಲ್ಲಿ ಹೊಸದಾಗಿ ೭೫ ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು,, ಈ ಮೂಲಕ ಸೋಂಕಿತರ ಸಂಖ್ಯೆ ೨,೪೯೩ ಕ್ಕೆ ಏರಿಕೆಯಾಗಿದೆ.
ಇಂದು ಉಡುಪಿಯಲ್ಲಿ ೨೭, ಬೆಂಗಳೂರಿನಲ್ಲಿ ೭, ಹಾಸನದಲ್ಲಿ ೧೩, ಕಲಬುರಗಿಯಲ್ಲಿ ೩, ಚಿತ್ರದುರ್ಗ ೬, ಯಾದಗಿರಿ ೭, ಚಿಕ್ಕಮಗಳೂರು ೩ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೬, ವಿಜಯಪುರ ೨, ರಾಯಚೂರಿನಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ೨,೪೯೩ ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ೨೮ ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ೮೦೯ ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ೧೬೩೫ ಸಕ್ರಿಯ ಪ್ರಕರಣಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

error: