
ಬೆಂಗಳೂರು: ವಾರದೊಳಗೆ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ, ಪ್ರಕ್ರಿಯೆ ಆರಂಭಿಸುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ ಬೆನ್ನಲ್ಲೇ, ‘ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನ. 5ರಿಂದ ಆರಂಭವಾಗಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
‘ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ’ ಎಂದೂ ಅವರು ಹೇಳಿದ್ದಾರೆ.
‘ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಕುರಿತು ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ತಕ್ಷಣ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಗುರುವಾರ (ಅ.22) ವೇಳಾಪಟ್ಟಿ ಪ್ರಕಟಗೊಳ್ಳಲಿದೆ’ ಎಂದೂ ಅವರು ಹೇಳಿದ್ದಾರೆ.
Source: ಪ್ರಜಾವಾಣಿ
More Stories
ಸುಪ್ರೀಂ ಕೋರ್ಟ್ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ನೇಮಕ
ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ `NSS’ ಘಟಕ ಕಡ್ಡಾಯ : ಸಚಿವ ನಾರಾಯಣಗೌಡ
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಮೇ.24ರಿಂದ ಪರೀಕ್ಷೆ ಆರಂಭ