ಸವದತ್ತಿ : ಗ್ರಾಮ ಪಂಚಾಯತಿ ಅಕ್ರಮ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರಿಂದ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು
ಹಲ್ಲೆಗೊಳಗಾದ ವ್ಯಕ್ತಿ ಸಂಗಪ್ಪ ಗೂಡಗಾರ್ ಎಂದು ತಿಳಿದು ಬಂದಿದೆ. ಈತನ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರಿಂದ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಧ್ಯಕ್ಷ ವಿರೂಪಾಕ್ಷ ತೊರಗಲ್, ಪಿಡಿಓ ಫಕ್ಕಿರವ್ವ ಹನಸಿ ವಿರುದ್ದ ೨೦೨೦-೨೧ ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯ ಹಣ ದುರುಪಯೋಗ ಆರೋಪದ ಹಿನ್ನೆಲೆ ಸಂಗಪ್ಪ ಗೂಡಗಾರ್ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊರೆ ಹೋಗಿದ್ದರು. ಅಕ್ರಮದ ತನಿಖೆ ಮಾಡುವಂತೆ ತಾಲೂಕು ಪಂಚಾಯತಿಗೆ ಸಿಇಓ ಆದೇಶ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತಿ ಎಡಿ ಸಂಗನಗೌಡ ಹಂದ್ರಾಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಏನಿದೆ..?
ಹೂಲಿ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಫಕ್ಕಿರವ್ವ ಹನಸಿ, ಅಧ್ಯಕ್ಷ ವಿರೂಪಾಕ್ಷ ತೊರಗಲ್ ಹಾಗೂ ಗ್ರಾಮದ ನಿವಾಸಿ ಸಂಗಪ್ಪ ಗೂಡಗಾರ್ ಸಮ್ಮುಖದಲ್ಲಿ ತಾಲೂಕು ಪಂಚಾಯತ ಎಡಿ ಸಂಗನಗೌಡ ಹಂದ್ರಾಳ ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಧ್ಯಕ್ಷ ವಿರೂಪಾಕ್ಷ ತೊರಗಲ್ ಸಂಗಪ್ಪ ಗೂಡಗಾರ್ ಅವರಿಗೆ ಕಪಾಳಕ್ಕೆ ಹಾಗೂ ಬೆನ್ನಿಗೆ ಎರಡೂ ಕೈಗಳಿಂದ ಬಡಿದಿದ್ದು ಚಪ್ಪಲಿ ತೋರಿಸಿ ಅದರಿಂದಲೂ ಬಡೆಯುವುದಾಗಿ ಹೇಳಲಾಗಿದೆ, ಇಷ್ಟಾಗುತ್ತಿದ್ದಂತೆ ಅಧ್ಯಕ್ಷ ವಿರೂಪಾಕ್ಷ ತೊರಗಲ್ ಬೆಂಬಲಿತ ಸದಸ್ಯರಿಂದ ಹಲ್ಲೆ ನಡೆದಿರುವುದು ಕಂಡುಬoದಿದೆ.
More Stories
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ
ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಸಚಿವ ಶಿವರಾಮ ಹೆಬ್ಬಾರ ರವರು ಮುಖ್ಯಮಂತ್ರಿಗೆ ಮನವಿ
10 ದಿನಗಳಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ, ಸಚಿವ ಶ್ರೀರಾಮುಲು ಭರವಸೆ