April 30, 2024

Bhavana Tv

Its Your Channel

ಸದಾ ಜನರ ಹಿತಕ್ಕೆ ಶ್ರಮಿಸುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆರವರ ಸೇವಾಕಾರ್ಯ ಸರ್ವರಿಗೂ ಪ್ರೇರಣೆ -. ಶಶಿಕಲಾ ಜೊಲ್ಲೆ

ನಿಪ್ಪಾಣಿ :- ನಿಪ್ಪಾಣಿ ನಗರದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಫಲಾನುಭವಿಗಳಿಗೆ ಅನುದಾನ ವಿತರಣೆ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಭಾಗವಹಿಸಿ, ಮಾತನಾಡಿದರು.

ತಾಲೂಕಿನ ಫಲಾನುಭವಿಗಳಿಗೆ ಆರೋಗ್ಯ ರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ಸಹಾಯಧನ ಚೆಕ್, ಮಾಶಾಸನ, ಕೃಷಿ ಅನುದಾನಡಿಯಲ್ಲಿ ಚೆಕ್, ಸ್ವಉದ್ಯೋಗ ನಡೆಸುವ ಫಲಾನುಭವಿಗಳಿಗೆ ಸಿಡ್ಬಿ ಸಮೃದ್ಧಿ ಯೋಜನೆಯಡಿಯಲ್ಲಿ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಸದಾ ಜನರ ಒಳಿತಿಗಾಗಿ ವಿವಿಧ ಕ್ಷೇತ್ರಗಳಲ್ಲೂ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಸಮಾಜಮುಖಿ ಕಾರ್ಯಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಕೃಷ್ಣಾ.ಟಿ, ನಿಪ್ಪಾಣಿ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಫಲಾಭವಿಗಳು ಪಾಲ್ಗೊಂಡಿದ್ದರು

error: