April 29, 2024

Bhavana Tv

Its Your Channel

ನಮ್ಮ ದೇಶ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಶ್ರಮಿಸಿದ ಮಹಾನ್ ಚೇತನರನ್ನು ಸ್ಮರಿಸೋಣ-ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ : ಇಂದು 73 ನೇ ಗಣರಾಜ್ಯೋತ್ಸವ ಅಂಗವಾಗಿ ಚಿಕ್ಕೋಡಿಯ ಆರ್.ಡಿ.ಕಾಲೇಜು ತಾಲೂಕು ಕ್ರೀಡಾಂಗಣದಲ್ಲಿ, ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಗಣರಾಜ್ಯೋತ್ಸವ ಸಂಭ್ರಮದ ಈ ದಿನದಂದು ನಮ್ಮ ದೇಶದ ಸ್ವಾತಂತ್ರ‍್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರಿಗೆ ಗೌರವ ಸಲ್ಲಿಸೋಣ. ದೇಶದ ಆಚಾರ-ವಿಚಾರಗಳನ್ನು ಗೌರವಿಸೋಣ. ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ್ ಪ್ರೇಮಲತಾ ದೇಶಪಾಂಡೆ, ಪುರಸಭೆ ಅಧ್ಯಕ್ಷರಾದ ಪ್ರವೀಣ ಕಾಂಬಳೆ, ಉಪಾಧ್ಯಕ್ಷರಾದ ಸಂಜಯ ಕವಟಗಿಮಠ, ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

error: