October 24, 2024

Bhavana Tv

Its Your Channel

ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಸ್ವಚ್ಛ ಭಾರತ ನಿರ್ಮಾಣಕ್ಕೆ ಕೈಜೋಡಿಸೋಣ- ಸಚಿವರಾದ ಶಶಿಕಲಾ ಜೊಲ್ಲೆ

ನಿಪ್ಪಾಣಿ: ನಗರದಲ್ಲಿ ತಾಲೂಕು ಪಂಚಾಯತ್ ವತಿಯಿಂದ 93 ಲಕ್ಷ ರೂ. ಮೊತ್ತದಲ್ಲಿ ಕ್ಷೇತ್ರ ವ್ಯಾಪ್ತಿಯ 17 ಗ್ರಾಮ ಪಂಚಾಯತ್ ಗಳಿಗೆ ನೂತನ ಕಸ ವಿಲೇವಾರಿ ವಾಹನಗಳನ್ನು (ಸ್ವಚ್ಛ ವಾಹಿನಿ) ಹುಕ್ಕೇರಿ ಶ್ರೀ ಅಭಿನವ ಮಂಜುನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಹಸ್ತಾಂತರಿಸಿದರು. ಕ್ಷೇತ್ರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಈ ವಾಹನಗಳಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಂಡು, ಗ್ರಾಮದ ಸ್ವಚ್ಛತೆ ಕಾಪಾಡಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಉಳಾಗಡ್ಡಿ, ನಗರಸಭೆ ಅಧ್ಯಕ್ಷರು, ಸದಸ್ಯರು, ಗ್ರಾಂ.ಪA.ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ಮಹೇಶ ಶರ್ಮಾ, ಬೆಳಗಾವಿ

error: