ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ತಿರುಗಾಡುವ ದಾರಿಗೆ ಅಡ್ಡಲಾಗಿ ತಂತಿಬೇಲಿ ನಿರ್ಮಿಸಿದ್ದಾರೆ ಎಂದು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಸಮಸ್ಯೆ ಬಗೆಹರಿಸದ ಕಾರಣ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವನ್ನು ಇಟ್ಟು ಪ್ರತಿಭಟನೆ ನಡೆಸಿದರು.
ನಂತರ ಶಿವಪುರ ಗ್ರಾಮದ ರೈತ ಮೋರ್ಚಾ ಅಧ್ಯಕ್ಷರಾದ ಸಿದ್ದಪ್ಪ ಮಾತನಾಡಿ ನಾವು ಸಂವಿಧಾನದ ಚೌಕಟ್ಟಿನಲ್ಲಿ ಹೋರಾಟವನ್ನು ಮಾಡುತ್ತೇವೆ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕುಗಳನ್ನು ಯಾರು ಕಸಿಯಲು ಸಾಧ್ಯವಿಲ್ಲ . ಹಾಗಾಗಿ ಗ್ರಾಮ ಪಂಚಾಯಿತಿಯ ಆಡಳಿತದ ವಿರುದ್ಧ ನ್ಯಾಯ ಸಿಗುವವರೆಗೂ ನಮ್ಮ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಈ ಮೂಲಕ ಗ್ರಾಮಪಂಚಾಯತಿಯ ಆಡಳಿತ ವರ್ಗದವರಿಗೆ ಎಚ್ಚರಿಕೆ ನೀಡಿದ್ದಾರೆ . ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ವರದಿ ಸದಾನ೦ದಾ ಕನ್ನೆಗಾಲ ಗುಂಡ್ಲುಪೇಟೆ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ