ಗುಂಡ್ಲುಪೇಟೆ ; ತಾಲೂಕಿನ ಗೋಪಾಲಪುರ ಗ್ರಾಮದ ಶ್ರೀ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಶ್ರೀ ಗಳಾದ ಹಿಮ್ಮಡಿ ಗುರು ಮಲ್ಲ ಸ್ವಾಮಿಗಳು ಇಂದು ಮಧ್ಯಾಹ್ನ ೧೨ ಗಂಟೆ ಸಮಯದಲ್ಲಿ ಜಮೀನಿನಲ್ಲಿ ಕಾಯಕ ಮಾಡುತ್ತಿದ್ದ ಸಮಯದಲ್ಲಿ ನಾಗರ ಹಾವು ಕಡಿದು ಶಿವೈಕ್ಯರಾಗಿದ್ದಾರೆ. ಇವರಿಗೆ ೪೨ ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಕಬ್ಬಿಣ ಕೊಲೇಶ್ವರ ಮಠದ ಹಿರಿಯ ಶ್ರೀಗಳಾದ ಶ್ರೀ ಗಂಗಾಧರ ಸ್ವಾಮಿಗಳು ಹಾಗೂ ಗೋಪಾಲಪುರದ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
ನಾಳೆ ಗೋಪಾಲಪುರ ಗ್ರಾಮದಲ್ಲಿ ಕಬ್ಬಿಣ ಕೋಲೇಶ್ವರ ಮಠದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವರದಿ ; ಸದಾನಂದ ಕನ್ನೆಗಾಲ ಗುಂಡ್ಲಪೇಟೆ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ