ಗುಂಡ್ಲುಪೇಟೆ :- ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕೆಲವು ಪುಂಡರು ಕಿರುಕುಳ ನೀಡುತ್ತಿದ್ದುದನ್ನು ಗಮನಿಸಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ರಂಗಪ್ಪ ನಾಯಕ ರವರ ನೇತೃತ್ವದಲ್ಲಿ ಡಿಪೋ ವ್ಯವಸ್ಥಾಪಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಪುಂಡರ ಹಾವಳಿಯನ್ನು ತಡೆಗಟ್ಟಲು ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ರಂಗಪ್ಪ ನಾಯಕ ಮಾತನಾಡಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಪುಂಡರು ನೀಡುತ್ತಿರುವ ಕಿರುಕುಳವನ್ನು ಕೂಡಲೇ ಪೊಲೀಸ್ ಇಲಾಖೆ ಸಹಕಾರದೊಂದಿಗೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ರಂಗಪ್ಪನಾಯಕ, ಉಪಾಧ್ಯಕ್ಷರಾದ ಗಿರೀಶ್, ತಾಲೂಕು ಕಾರ್ಯಾಧ್ಯಕ್ಷರಾದ ಚಿನ್ನಸ್ವಾಮಿ,ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಗಜ ಮಲ್ಲು ,ಭೀಮನಬೀಡು ಗ್ರಾಮ ಘಟಕದ ಅಧ್ಯಕ್ಷರಾದ ಕೃಷ್ಣ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ನವೀನ್, ಹಂಗಳ ಹೋಬಳಿ ರೈತ ಘಟಕದ ಅಧ್ಯಕ್ಷರಾದ ಮಹೇಶ್, ತಾಲೂಕು ಕಾರ್ಯದರ್ಶಿ ರಾಜು, ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ