ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಊಟಿ ಮೈಸೂರು ರಸ್ತೆಯಲ್ಲಿರುವ ದ್ವಿಚಕ್ರ ವಾಹನಗಳ ಹಲವಾರು ಶೋರೂಂ ಗಳ ನಾಮಫಲಕವೂ ಆಂಗ್ಲ ಭಾಷೆಯಲ್ಲಿದ್ದು ಇದನ್ನು ಕೂಡಲೇ ತೆರವುಗೊಳಿಸಿ ಕನ್ನಡ ಭಾಷೆಯಲ್ಲಿ ಹಾಕುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಕೂಡಲೇ ಆಂಗ್ಲ ಭಾಷೆಯಲ್ಲಿರುವ ನಾಮಫಲಕವನ್ನು ತೆರವುಗೊಳಿಸಿ ಕನ್ನಡ ನಾಮ ಫಲಕವನ್ನು ಅಳವಡಿಸಬೇಕು. ಇಲ್ಲದಿದ್ದರೆ ಆಂಗ್ಲಭಾಷೆಯ ನಾಮ ಫಲಕಕ್ಕೆ ಮಸಿಬಳಿಯುವುದಾಗಿ ಎಚ್ಚರಿಕೆ ನೀಡಿದ್ದರು.
ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು, ಸಲಹೆಗಾರರಾದ ಮುಬಾರಕ್, ತಾಲೂಕು ಕಾರ್ಯ ಅಧ್ಯಕ್ಷರಾದ ಇಲಿಯಾಸ್, ಟೌನ್ ಉಪಾಧ್ಯಕ್ಷರಾದ ಸಾಧಿಕ್ ಪಾಶ, ಕಸಬಾ ಹೋಬಳಿಯ ಅಧ್ಯಕ್ಷರಾದ ಹೆಚ್ ರಾಜು, ಮಿಮಿಕ್ರಿ ರಾಜು ಉಪಸ್ಥಿತರಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ