ಗುಂಡ್ಲುಪೇಟೆ ಪಟ್ಟಣದ ಅಂಗಡಿಗಳ ಮುಂಭಾಗ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಅಳವಡಿಸಲು ಸೂಚಿಸಬೇಕು ಮತ್ತು ಅಳವಡಿಸಿರುವ ನಾಮಫಲಕವೂ ಕನ್ನಡದಲ್ಲಿ ಇರಬೇಕು ಎಂದು ಪುರಸಭೆ ಅಧ್ಯಕ್ಷರಿಗೆ ಕರ್ನಾಟಕ ಕಾವಲು ಪಡೆಯ ಸಂಘಟನೆಯವರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾವಲು ಪಡೆಯ ತಾಲೂಕು ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಪಟ್ಟಣದಲ್ಲಿ ಹಲವಾರು ಅಂಗಡಿ ಮಳಿಗೆ ಮುಂದೆ ಸಂಪೂರ್ಣ ಆಂಗ್ಲಭಾಷೆ ನಾಮಫಲಕ ವನ್ನೂ ತೆರವುಗೊಳಿಸಿ ಎಲ್ಲಾ ಮಳಿಗೆ ಮುಂಭಾಗ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಅಳವಡಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮಸಿ ಬಳಿಯುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಪಿ ಗಿರೀಶ್, ವೆಂಕಟೇಶ್ ಗೌಡ್ರು, ಇಲಿಯಾಸ್ ,ಸಾಧಿಕ್ ಪಾಶ, ಶಕೀಲಾ, ಹೆಚ್ ರಾಜು, ಮಿಮಿಕ್ರಿ ರಾಜು ,ಹಾಗೂ ಪುರಸಭಾ ಸದಸ್ಯರುಗಳು ಹಾಜರಿದ್ದರು.
ವರದಿ:ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ