ಗುಂಡ್ಲುಪೇಟೆ:- ಜೂ. 23ರಂದು ಪಟ್ಟಣದ ಸೋಮೇಶ್ವರ ಹಾಸ್ಟೆಲ್ ಎದುರು ತಾಲೂಕು ಕುಂಬಾರ ಸಮಾಜದ ಸಮುದಾಯ ಭವನ ಉದ್ಘಾಟನೆ ಆಗಲಿದ್ದು .ಅದರ ಪೂರ್ವಭಾವಿ ಸಭೆಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ಇಂದು ವೆಂಕಟರಾಜು ತಾಲೂಕು ಅಧ್ಯಕ್ಷರ ಸಮ್ಮುಖದಲ್ಲಿ ಕರೆಯಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದಿವಂಗತ ಎಚ್ ಎಸ್ ಮಹದೇವ ಪ್ರಸಾದ್ ಅವರ ಅವಧಿಯಲ್ಲಿ ನಮ್ಮ ಸಣ್ಣ ಸಮುದಾಯಕ್ಕೆ ಒಂದು ಸಮುದಾಯ ಭವನ ಬೇಕು ಎಂದು ಲಿಖಿತವಾಗಿ ಪತ್ರದ ಮೂಲಕ ನೀಡಿದ್ದರ ಫಲವಾಗಿ ಇಂದು ನಮಗೆ ಸಮುದಾಯ ಭವನ ನಿರ್ಮಾಣ ಆಗಿದೆ . ಶಾಸಕ ಸಿಎಸ್ ನಿರಂಜನ್ ಕುಮಾರ್ ಅವರಿಂದ ಉದ್ಘಾಟನೆ ನೆರವೇರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು , ಸ್ಥಳೀಯ ಜನಪ್ರತಿನಿಧಿಗಳು,ಮತ್ತು ನಮ್ಮ ಸಮುದಾಯದ ಮುಖಂಡರು, ಯುವಕರು, ಹೆಚ್ಚಿನಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಈ ಪತ್ರಿಕಾಗೋಷ್ಠಿಯ ಮೂಲಕ ಕೇಳಿಕೊಳ್ಳುತ್ತೇವೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿಎಸ್ ರಾಜೇಂದ್ರ, ತಾಲೂಕು ಅಧ್ಯಕ್ಷರಾದ ವೆಂಕಟ ರಾಜು ಪಿ. ಉಪಾಧ್ಯಕ್ಷರಾದ ಕೊಂಗಳ್ಳಿ ಶೆಟ್ಟಿ, ಹನುಮಂತ ಶೆಟ್ಟಿ,ಪ್ರಧಾನ ಕಾರ್ಯದರ್ಶಿಯಾದ ಹನುಮಂತ ಶೆಟ್ಟಿ,ಕೆ ಕುಂಬಾರರ ಸಮುದಾಯದ ಯುವಕರು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ