ಗುಂಡ್ಲುಪೇಟೆ :-ಕೇಂದ್ರ ಸರ್ಕಾರವು ದಿನಬಳಕೆ ದಿನಸಿ ಪದಾರ್ಥಗಳ ಮೇಲೆ ಏರಿರುವ ಜಿಎಸ್ಟಿ ತೆರಿಗೆಯನ್ನು ಹಿ೦ಪಡೆಯಬೇಕೆಂದು ಕರ್ನಾಟಕ ಕಾವಲು ಪಡೆ ಸಂಘಟನೆ ವತಿಯಿ೦ದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಾವಲು ಪಡೆಯ ತಾ.ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಕೇಂದ್ರ ಸರ್ಕಾರವು ವಿಧಿಸಿರುವ ಜಿಎಸ್ಟಿಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಇದರ ಬಗ್ಗೆ ಕ್ರಮ ವಹಿಸಿ ವಿಧಿಸಿರುವ ಜಿಎಸ್ಟಿ ತೆರಿಗೆಯನ್ನು ಕೂಡಲೇ ಹಿಂಪಡೆಯಬೇಕೆAದು ಒತ್ತಾಯಿಸಿ ಸರ್ಕಾರಕ್ಕೆ ಈ ಮೂಲಕ ಮುನ್ನೆಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು, ಕಾರ್ಯದರ್ಶಿಗಳಾದ ಮುಬಾರಕ್, ಜಿಲ್ಲಾ ಉಪಾಧ್ಯಕ್ಷರಾದ ಅಮೀರ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಅಬ್ದುಲ್ ರಶೀದ್, ತಾ. ಕಾರ್ಯಧ್ಯಕ್ಷರಾದ ಇಲಿಯಸ್, ಸಾದಿಕ್ ಪಾಶ, ಶಕೀಲ್, ಮಿಟಾಯಿ ಮಂಜು , ಎಚ್ ರಾಜು, ಮಿಮಿಕ್ರಿ ರಾಜು, ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಸದಾನ೦ದ ಕಣ್ಣೆಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ