April 29, 2024

Bhavana Tv

Its Your Channel

ಸಾರ್ವಜನಿಕ ಆಸ್ಪತ್ರೆಯಲ್ಲಿ ಆಧಾರ್ ಕಾರ್ಡ್ ತೆಗೆದುಕೊಂಡು ಚಿಕಿತ್ಸೆ ನೀಡುವ ಅವಶ್ಯಕತೆ ಏನಿದೆ ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ಆಕ್ರೋಶ

ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಹೊರ ರೋಗಿಗಳಿಗೆ ಚೀಟಿ ನೀಡುವ ಸಮಯದಲ್ಲಿ ತಮ್ಮ ತಮ್ಮ ಆಧಾರ್ ಕಾರ್ಡ್ ನಂಬರ್ ಗಳನ್ನು ಓಟಿಪಿ ಮೂಲಕ ಆಸ್ಪತ್ರೆಯ ಸಿಬ್ಬಂದಿಗಳು ಕೇಳುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸಿದ ತಾಲೂಕಿನ ರೈತ ಮುಖಂಡ ಕಡು ಬೂರು ಮಂಜುನಾಥ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಮಂಜುನಾಥ್ ರವರನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮ ಆಸ್ಪತ್ರೆಯಲ್ಲಿ ವ್ಯವಸ್ಥೆ ಬದಲಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾಗಿ ಆಸ್ಪತ್ರೆಯ ಮುಂದೆ ಹೋರಾಟ ಮಾಡುವುದಾಗಿ ಕಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾಡ್ರಹಳ್ಳಿ ಮಹದೇವಪ್ಪ ,ಹೊಸೂರು ಮಹೇಶ್, ಹಾಲಳ್ಳಿ ಮಹೇಶ್, ಕುಂ ದುಕೆರೆ ಸಂಪತ್ತು ,ಇನ್ನು ಮುಂತಾದವರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೇಗಾಲ

error: