May 17, 2024

Bhavana Tv

Its Your Channel

ರೈತ ಪರ್ವ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸುರೇಶ್ ಆಯ್ಕೆ

ಗುಂಡ್ಲುಪೇಟೆ. ಚಾಮರಾಜನಗರ ಜಿಲ್ಲೆಯ ರೈತ ಪರ್ವ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಗುಂಡ್ಲುಪೇಟೆ ಪಟ್ಟಣದ ಸುರೇಶ್ ರವರು ಭಾನುವಾರ ನಡೆದ ರೈತ ಸಂಘಟನೆಯ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷರಾಗಿರುವ ಅರುಣ್ ಕುಮಾರ್ ರವರು ಘೋಷಣೆ ಮಾಡಿದರು. ನಂತರ ಮಾತನಾಡಿದ ಅವರು ರೈತರ ಸಮಸ್ಯೆಗಳನ್ನು ಬಗೆ ಹರಿಸಲು ತಮ್ಮ ಅಧಿಕಾರ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾಧ್ಯಕ್ಷರಿಗೆ ಸಲಹೆ ನೀಡಿದರು. ಸಂಘಟನೆ ಕಾರ್ಯಕರ್ತರು ಹಾಗೂ ರೈತ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೇಗಾಲ

error: