ಗುಂಡ್ಲುಪೇಟೆ ಪಟ್ಟಣದ ಎಚ್ ಎಸ್ ಮಹದೇವ ಪ್ರಸಾದ್ ನಗರದ ನಿವಾಸಿಯಾದ ಅಬ್ದುಲ್ ಮಾಲಿಕ್ ರವರ ಸುಪುತ್ರಿ ಕುಮಾರಿ ಯಾಶ್ಮಿನ್ ಬಾನು ರವರು ರಾಷ್ಟ್ರಮಟ್ಟದ ಎಪಿಜೆ ಅಬ್ದುಲ್ ಕಲಾಂ ರವರ ಕುರಿತು ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಇವರಿಗೆ ಅಖಿಲ ಭಾರತ ಕರುನಾಡು ಯುವಶಕ್ತಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಅಧ್ಯಕ್ಷರಾದ ಮುನೀರ್ ಪಾಷಾ ರವರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಲಹೆಗಾರರಾದ ಕಾಳಿಂಗ ಸ್ವಾಮಿ ಮಾತನಾಡಿ ಇಂದಿನ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳು ಹೆಚ್ಚಾಗಿವೆ. ಹಾಗಾಗಿ ಒಂದೊAದು ಕ್ಷೇತ್ರದಲ್ಲಿ ಅವರವರ ಶೈಲಿಯಲ್ಲಿ ಪ್ರತಿಭೆಯನ್ನು ಗುರುತಿಸಿ ತೊಡಗಿಸಿಕೊಂಡು ಬಂದಿದ್ದಾರೆ ಅವರಿಗೆ ಮುಂದಿನ ದಿನಗಳಲ್ಲಿ ಒಳಿತಾಗಲಿ ಎಂದು ವಿದ್ಯಾರ್ಥಿಗಳನ್ನು ಮತ್ತು ಸನ್ಮಾನ ಪಡೆದ ಪ್ರತಿಭೆಯನ್ನು ಉದ್ದೇಶಿಸಿದರು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲೂಕು ಅಧ್ಯಕ್ಷರಾದ ಅಬ್ದುಲ್ ಮಾಲಿಕ್ , ಅಖಿಲ ಭಾರತ ಕರುನಾಡ ಯುವ ಶಕ್ತಿ ಸಂಘಟನೆಯ ತಾಲೂಕು ಗೌರವ ಅಧ್ಯಕ್ಷರಾದ ರೆಹ್ಮತ್ ಉಲ್ಲಾಖಾನ್, ಪ್ರಥಮ ದರ್ಜೆಕಾಲೇಜಿನ ಪ್ರಾಂಶುಪಾಲರಾದ ಚಾಮರಾಜು, ದೇವರಾಜು ಹಾಗೂ ಶಾಲಿನಿ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
ಶ್ರೀ ಮಲೆ ಮಹದೇಶ್ವರ ಜಾತ್ರೆ
ಸೋಮೇಶ್ ಸೈಕ್ಲಿಂಗ್ ಸವಾರರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ, ಸಾಧನೆಗೆ ಸಹಾಯ ಹಸ್ತ ಕೋರಿ ಮನವಿ
ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯದ ಸಂಸದರು ಮೌನವಹಿಸಿರುವುದು ಏಕೆ?