April 24, 2024

Bhavana Tv

Its Your Channel

ಶ್ರೀ ಗುರು ರಾಘವೇಂದ್ರ ರಾಯರ ಮಠದಲ್ಲಿ ಮಧ್ವ ನವಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ

ಗುಂಡ್ಲುಪೇಟೆ :– ಮಧ್ವ ನವಮಿ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ರಾಯರ ಮಠದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ , ಹಾಗೂ ಪವಮಾನ ಹೋಮ ಶ್ರೀ ಮದ್ವಾಚಾರ್ಯರು ಮತ್ತು ಶ್ರೀ ಪಂಚಮುಖಿ ಪ್ರಾಣದೇವರ ಉತ್ಸಾವಮೂರ್ತಿಗೆ ಅಲಂಕಾರಿಕ ರಥೋತ್ಸವ ನಡೆಯಿತು

ಗುಂಡ್ಲುಪೇಟೆ ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಶ್ರೀ ಗುರು ರಾಘವೇಂದ್ರ ರಾಯರ ಮಠದಲ್ಲಿ ಮಧ್ವ ನವಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಅಲಂಕಾರ ಬ್ರಾಹ್ಮಣರ ಸೇವೆ, ಮಹಾಮಂಗಳಾರತಿ ,ಮತ್ತು ಸಂಗೀತ ಕಾರ್ಯಕ್ರಮ ಮತ್ತು ಪುರಂದರದಾಸರ ಪುಣ್ಯಸ್ಮರಣೆಯ ಪ್ರಯುಕ್ತ ದಾಸವರೆನ್ಯಾರ ದೇವರ ನಾಮಗಳ ಸ್ಪರ್ಧೆಯಲ್ಲಿನ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಅನೇಕ ಭಕ್ತ ಬಾಂಧವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶ್ರೀ ಮುಖ್ಯ ಪ್ರಾಣದೇವರು ಶ್ರೀ ಮಧ್ವಾಚಾರ್ಯರು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳು ಸನ್ಮ0ಗಳವ ಹರಿಸಲಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಎಂದು ರಾಜೇಶ್ವರಿ ಚಂದ್ರಶೇಖರ್ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮೃತಿಕ ಬೃಂದಾವನ ಸನ್ನಿಧಾನ ಸಂಸ್ಥಾಪಕರು ಹಾಗೂ ಟ್ರಸ್ಟ್ ಅಧ್ಯಕ್ಷರು ಮತ್ತು ಸೇವಾ ಸಮಿತಿಯ ಎಲ್ಲಾ ಸದಸ್ಯರುಗಳು ಈ ಮಾಧ್ಯಮದ ಮೂಲಕ ತಿಳಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳುಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೇಗಾಲ

error: