May 4, 2024

Bhavana Tv

Its Your Channel

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್ ವಿತರಣೆ

ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಎಂ ಎಚ್ ಗಣೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್ನ್ನು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್ ಮಾತನಾಡಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ಮನೆಯ ಮಹಿಳೆಗೆ 2000 ಖಚಿತ ಎಂಬ ವಿನೂತನ ಘೋಷಣೆಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಕಬ್ಬಳ್ಳಿ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಬಿ. ರಾಜಶೇಖರ್, ಮುಖಂಡರಾದ ಶಿವಣ್ಣ , ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ್, ಮಾಜಿ ಗ್ರಾಮ್ ಪಂಚಾಯ್ತಿ ಸದಸ್ಯರಾದ ಶಿವರಾಮು, ನಾಗೇಶ್ ಮಾದಪ್ಪ ಸೋಮಶೇಖರ್ ಪುಟ್ಟಬಸವಯ್ಯ, ದೊರೆಸ್ವಾಮಿ , ಪಟೇಲ್ ಮಾದೇವಪ್ಪ, ಶಿವಕುಮಾರ್ ,ವಿಶ್ವನಾಥ್, ಹಾಗೂ ಗ್ರಾಮದ ಯುವಕರು ಮಹಿಳೆಯರು ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೆಗಾಲ

error: