ಬಾಗೇಪಲ್ಲಿ:-ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯ ಚನ್ನರಾಯಣಪಲ್ಲಿ ಗ್ರಾಮದ ವ್ಯಾಪಾರಸ್ಥೆಯ ಮೇಲೆ ಕೊರೊನಾ ಕೇಸ್ ಹಾಕುತ್ತೇನೆ ಎಂದು ಪೊಲೀಸ್ ಅಧಿಕಾರಿಯು ಎಚ್ಚರಿಕೆ ನೀಡಿದ್ದಾರೆ. ರಕ್ಷಣೆ ಕೊಡಬೇಕಾದವರೆ ದರ್ಪ ತೋರಿದ್ದಾರೆ ಎಂದು ಆರೋಪಿಸಿರುವ ಮಹಿಳೆ ಪೊಲೀಸ್ ಠಾಣೆ ಮುಂಭಾಗದಲ್ಲೇ ವ್ಯಾಪಾರ ನಡೆಸಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಬೀದಿ ಬದಿ ತಳ್ಳುವ ಗಾಡಿಯ ಮೇಲೆ ಶೇಂಗಾ, ನೇರಳೆ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ದರ್ಪ ತೋರಿದ್ದಾರೆಂದು ಆರೋಪಿಸಲಾಗಿದೆ. ವ್ಯಾಪಾರಸ್ಥೆ ಗಂಗರತ್ನಮ್ಮರವರ ಮೇಲೆ ಕೊರೊನಾ ಕೇಸ್ ಹಾಕುತ್ತೇನೆ ಎಂದು ಪೊಲೀಸ್ ಅಧಿಕಾರಿಯು ಅವಾಜ್ ಹಾಕಿದ್ದಾರೆ. ರಕ್ಷಣೆ ಕೊಡಬೇಕಾದವರೆ ದರ್ಪ ತೋರಿದ್ದಾರೆ ಎಂದು ಆರೋಪಿಸಿರುವ ಮಹಿಳೆ ಪೊಲೀಸ್ ಠಾಣೆ ಮುಂಭಾಗದಲ್ಲೇ ವ್ಯಾಪಾರ ನಡೆಸಿದ್ದಾರೆ.
ಬಾಗೇಪಲ್ಲಿ ತಾಲೂಕಿನಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ, ಉಳ್ಳವರಿಗೊಂದು ನ್ಯಾಯ ಎಂಬAತೆ ಆಡಳಿತ ವೈಖರಿ ಇದೆ. ಅದೇ ರೀತಿಯಲ್ಲಿ ಪೊಲೀಸರ ವರ್ತನೆಯೂ ಬಡವರನ್ನು ಹೆದರಿಸಿ, ಬೆದರಿಸುತ್ತಿದ್ದಾರೆ. ಆದರೆ ಶ್ರೀಮಂತರು, ರಾಜಕೀಯ ಪ್ರಬಲರ ಅನ್ಯಾಯಗಳನ್ನು ಪ್ರಶ್ನೆ ಮಾಡುವ ಗೋಜಿಗೂ ಹೋಗುವುದಿಲ್ಲ. ಬಡವರ ಮೇಲೆ ದರ್ಪ ತೋರುವುದನ್ನು ಬಿಟ್ಟು ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳಬೇಕು.” ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ವರದಿ:- ಗೋಪಾಲ ರೆಡ್ಡಿ, ಬಾಗೇಪಲ್ಲಿ
More Stories
ಬಾಗೇಪಲ್ಲಿ ಮಂಡಲ: ಮಹಿಳಾ ಕಾರ್ಯಕಾರಿಣಿ ಸಭೆ
ತಾಲ್ಲೂಕಿನಲ್ಲಿ ನಿಲ್ಲದ ನರೇಗಾ ಅಕ್ರಮಗಳು; ಕಣ್ಮುಚ್ಚಿ ಕುಳಿತ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿಗಳು?
ದೇಶದ ೫೦ ಕೋಟಿ ಜನರಿಗೆ ಕೋವಿಡ್ ಲಸಿಕೆ :- ಬಿಜೆಪಿ ಜಿಲ್ಲಾದ್ಯಕ್ಷ ರಾಮಲಿಂಗಪ್ಪ