May 20, 2024

Bhavana Tv

Its Your Channel

ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸುಮಾರು ೧೪೫ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಸರ್ಕಾರದಿಂದ ಮಂಜೂರು ಆಗಿದ್ದು ಇಂದು ಬಾಗೇಪಲ್ಲಿ ಪಟ್ಟಣದ ಶಾಸಕರಾದ ಎಸ್. ಎನ್ ಸುಬ್ಬಾರೆಡ್ಡಿಯವರು ಸುಮಾರು ೧೦ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದರು

ತದನಂತರ ಮಾತನಾಡಿ ನಾನು ಸಹ ಬಡ ಕುಟುಂಬದಿAದ ಬಂದಿದ್ದೇನೆ. ಬಡವರ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಸ್ಥಿತಿಗತಿ ಏನೆಂಬುದು ನನಗೆ ಗೊತ್ತು. ಈ ಕಾರಣಕ್ಕಾಗಿಯೇ ರಾಜ್ಯ ಸರ್ಕಾರದ ವತಿಯಿಂದ ವಿದ್ಯಾಸಿರಿ ಯೋಜನೆ ಅಡಿಯಲ್ಲಿ ಇದೀಗ ಲ್ಯಾಪ್‌ಟಾಪ್‌ಗಳನ್ನು ನೀಡುವ ಮೂಲಕ ಶ್ರೀಮಂತ ಮಕ್ಕಳಿಗೆ ಬಡ ಮಕ್ಕಳು ಸಹ ಶೈಕ್ಷಣಿಕ ಸ್ಪರ್ಧೆಯೊಡ್ಡುವಂತಾಗಬೇಕು. ಲ್ಯಾಪ್‌ಟಾಪ್‌ಗಳಿಂದ ಜಾಗತಿಕ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಲಿದ್ದು, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಸಮಗ್ರ ಪ್ರಗತಿಗೆ ನೆರವಾಗಲಿದೆ ಎಂಬ ಆಶಯದಿಂದ ಮಕ್ಕಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು, ಕೆ ಡಿ ಪಿ ಸದಸ್ಯ ಅಮರನಾಥ ರೆಡ್ಡಿ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾದ ರಾಜಕುಮಾರ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ:-ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ ತಾಲ್ಲೂಕು

error: