April 28, 2024

Bhavana Tv

Its Your Channel

ಬಾಗೇಪಲ್ಲಿ ಮಂಡಲ: ಮಹಿಳಾ ಕಾರ್ಯಕಾರಿಣಿ ಸಭೆ

ಬಾಗೇಪಲ್ಲಿ:-ಭಾರತೀಯ ಜನತಾ ಪಾರ್ಟಿ ರಾಜಕೀಯ ಮಾಡಲೆಂದೇ ಇರುವ ಪಕ್ಷವಲ್ಲ. ಸಾಮಾಜಿಕ ಬದ್ಧತೆ ರೂಢಿಸಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಕೂಡಾ ಮುಖ್ಯವಾಹಿನಿಗೆ ತರುವ ಕಾರ್ಯ ಮಾಡುತ್ತಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಬಿಜೆಪಿ ಪಕ್ಷದ ಮಂಡಲಾದ್ಯಕ್ಷ ಆರ್ ಪ್ರತಾಪ್ ಹೇಳಿದರು.

ಬಾಗೇಪಲ್ಲಿ ಪಟ್ಟಣದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಬಾಗೇಪಲ್ಲಿ ಬಿಜೆಪಿ ಮಹಿಳಾ ಮೋರ್ಚಾ ತಾಲ್ಲೂಕು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೋವಿಡ್ ಸಮಯದಲ್ಲಿ ಪಕ್ಷವು ಸೇವಾ ಸಂಘಟನಾ ಅಭಿಯಾನದ ಅಡಿಯಲ್ಲಿ ನಡೆಸಿದ ಸೇವಾ ಚಟುವಟಿಕೆಗಳು ಪ್ರತಿ ವ್ಯಕ್ತಿಯ ಮನಸ್ಸು ಮುಟ್ಟಿದೆ. ಸಂಕಷ್ಟದ ಸಮಯದಲ್ಲಿ ಒಂದು ರಾಜಕೀಯ ಪಕ್ಷ ಯಾವ ರೀತಿ ಜನರಿಗೆ ಸಹಾಯ ಮಾಡಬಲ್ಲದು ಎಂಬುವುದನ್ನು ಬಿಜೆಪಿ ಸಮಾಜಕ್ಕೆ ತೋರಿಸಿಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ನಮ್ಮಿಂದ ಆಗಬೇಕು ಮತ್ತು ಮುಂಬರುವ ತಾ.ಪಂ.ಮತ್ತು ಜಿ.ಪಂ. ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲು ಈಗಿನಿಂದಲೇ ತಯಾರಿ ನಡೆಸಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಮಹಿಳಾ ಮೋರ್ಚಾ ಬಾಗೇಪಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುಳಾ ಮಾತನಾಡಿ, ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಉತ್ತಮ ಮಟ್ಟದಲ್ಲಿ ಮಹಿಳಾ ಮೋರ್ಚಾದ ಕೆಲಸ ಕಾರ್ಯಗಳು ನಡೆಯುತ್ತೇವೆ. ರಾಜ್ಯ ಮತ್ತು ರಾಷ್ಟ್ರಗಳಲ್ಲಿ ನಮ್ಮದೇ ಆದ ಸರ್ಕಾರದಲ್ಲಿರುವ ಸೇವೆಗಳನ್ನು ಸದುಪಯೋಗ ಪಡೆದುಕೊಳ್ಳತ್ತೇವೆ. ಪ್ರತಿಯೊಬ್ಬ ಕಾರ್ಯಕರ್ತರು ಕೊರೊನಾ ವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳಬೇಕು. ಸಾಮಾಜಿಕ ಅಂತರ ಮಾಸ್ಕ್ ಮತ್ತು ಆರೋಗ್ಯ ಸ್ವಚ್ಛತೆಯ ಬಗ್ಗೆ ಜನರಲ್ಲಿ ಮಹಿಳಾ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯ ವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೀಲಾವತಿ ಶ್ರೀನಿವಾಸ್,ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ನರ್ಮದಾ ರೆಡ್ಡಿ, ದೀಪೀಕಾ ಮಂಜುನಾಥ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ನಿರ್ಮಲಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುಳಾ, ಗಂಗುಲಮ್ಮ, ಮಾತೃಘಟಕ ಅದ್ಯಕ್ಷೆ ವನಜಾ,ರಮಾ ದೇವಿ, ರೂಪಾ,ಶೋಭಾ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.
ವರದಿ:ಗೋಪಾಲರೆಡ್ಡಿ ಬಾಗೇಪಲ್ಲಿ

error: