May 4, 2024

Bhavana Tv

Its Your Channel

ಬಡವರಿಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ.

ಬಾಗೇಪಲ್ಲಿ : ಸರ್ಕಾರ ಮಾಡುವ ಕೆಲಸ ನಮ್ಮ ಕಾಂಗ್ರೆಸ್ ಪಕ್ಷ ಮಾಡುತ್ತಿದೆ,ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ನಮ್ಮ ಪಕ್ಷದ ಸಿದ್ಧಾಂತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಬಾಗೇಪಲ್ಲಿ ಜನರ ಸಂಕಷ್ಟದಲ್ಲಿ ಭಾಗಿಯಾಗಿ ನೆರವು ನೀಡಿ ಅವರಿಗೆ ಶಕ್ತಿ ತುಂಬುವುದೇ ಕಾಂಗ್ರೆಸ್ ಸಿದ್ಧಾಂತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು, ಬಾಗೇಪಲ್ಲಿ ಶಾಸಕರು ಎಸ್ ಎನ್ ಸುಬ್ಬಾರೆಡ್ಡಿ ಅವರು ೮೧,೦೦೦ ಆಹಾರ ಕಿಟ್ ಬಾಗೇಪಲ್ಲಿ ಜನತೆಗೆ ನೀಡಿದರು, ಇದೇ ಸಂದರ್ಭದಲ್ಲಿ ಹಾಜರಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಇಂತಹ ನಾಯಕರ ಜೊತೆ ನಾವಿದ್ದೇವೆ, ಸರ್ಕಾರ ನಿಮಗೇನು ಕೊಡಬೇಕಾಗಿತ್ತು ಅದನ್ನು ನೀಡಲಿಲ್ಲ, ತರಕಾರಿ ಬೆಳೆಗಾರರಿಗೆ ಕೊಡಬೇಕಾದ ಹಣ ಕೊಟ್ಟಿಲ್ಲ ಸಾಂಪ್ರದಾಯಕ ವೃತ್ತಿ ಉಳಿಸಿಕೊಂಡು ಹೋಗುತ್ತಿರುವವರಿಗೆ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಈ ಸಂಕಷ್ಟದ ಸಮಯದಲ್ಲಿ ಎಲ್ಲರೂ ಮನೆಮನೆಗೆ ಹೋಗಿ ಅವರಿಗೆ ಸಹಾಯ ಮಾಡಬೇಕು ಸಾಂತ್ವನ ಹೇಳಬೇಕು, ಬಿಜೆಪಿಯವರು ಯಾರ ಮನೆಗೆ ಹೋಗಿಲ್ಲ ಸಹಾಯ ಮಾಡಿಲ್ಲ ,ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಉದ್ದಗಲಕ್ಕೂ ಜನರ ಸೇವೆ ಮಾಡುತ್ತಿದ್ದಾರೆ.

ಜನರ ಮಧ್ಯ ಹೋಗಿ ಅವರ ಕಷ್ಟದಲ್ಲಿ ನಾವಿದ್ದೇವೆ ಎಂದು ಧೈರ್ಯ ತುಂಬಬೇಕು ಇದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಕಾರ್ಯಕರ್ತರಿಗೆ ಧೈರ್ಯ ಕೊಡಿ, ಈಗ ಸುರಿಯುತ್ತಿರುವ ಮಳೆ ಶುಭಸೂಚಕ ಸಮೃದ್ಧಿ ಸಂಕೇತ ! ಮಳೆರಾಯನ ಕಾಂಗ್ರೆಸ್ ನೆರವಿನ ಕಾರ್ಯ ಹಾಗೂ ಸರಕಾರದ ಹೋರಾಟಕ್ಕೆ ಶುಭಕೋರಿದ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೈಲಿ, ರಾಮಲಿಂಗಾರೆಡ್ಡಿ, ಗೌರಿಬಿದನೂರು ಶಾಸಕರಾದ ಶಿವಶಂಕರ್ ರೆಡ್ಡಿ, ಬಾಗೇಪಲ್ಲಿ ಶಾಸಕರಾದ, ಎಸ್,ಎನ್, ಸುಬ್ಬಾರೆಡ್ಡಿ, ಕೆಡಿಪಿ ಸದಸ್ಯರು ಅಮರನಾಥ ರೆಡ್ಡಿ, ಬಿವಿ ವೆಂಕಟರಮಣ, ಸಾಯಿ ಸಮಿತಿಯ ಅಧ್ಯಕ್ಷರು ನಂಜುAಡಪ್ಪ, ತಾಲೂಕು ಪಂಚಾಯತಿ ಅಧ್ಯಕ್ಷರು ನರೇಂದ್ರಬಾಬು, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು ಕೃಷ್ಣಪ್ಪ, ಮಲ್ಲಿ ರೆಡ್ಡಿ, ಸತೀಶ್ ರೆಡ್ಡಿ, ಮತ್ತಿತರೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ವರದಿ:-ರಾ ನಾ ಗೋಪಾಲರೆಡ್ಡಿ ಬಾಗೇಪಲ್ಲಿ

error: