May 5, 2024

Bhavana Tv

Its Your Channel

ಗೂಳೂರುನಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯಾಲಯ ಸಿ.ಮುನಿರಾಜುರವರಿಂದ ಚಾಲನೆ

ಬಾಗೇಪಲ್ಲಿ:-ಕೇಂದ್ರ ಸರ್ಕಾರದ ನರೇಂದ್ರ ಮೋದಿ ಜನಪ್ರಿಯ ಕರ‍್ಯಕ್ರಮಗಳ ಬಗ್ಗೆ ಪ್ರತಿ ಮನೆ ಮನೆಗೂ ಮಾಹಿತಿ ತಲುಪಿಸುವ ಸಲುವಾಗಿ ಬಾಗೇಪಲ್ಲಿ ತಾಲ್ಲೂಕು ಗೂಳೂರು ಹೋಬಳಿ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ನಗರದ ವರ್ತುಲ ರಸ್ತೆ ಪ್ರಾಧಿಕಾರ ಅದ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಿ.ಮುನಿರಾಜು ತಿಳಿಸಿದರು. ಅವರು
ಗೂಳೂರು ಗ್ರಾಮದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಿ ತರಲು ಹಾಗೂ ಬೂತ್ ಮಟ್ಟದಿಂದ ಪಕ್ಷವನ್ನು ಬೆಳೆಸಲು, ಕೇಂದ್ರ ಸರ್ಕಾರದ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಜನಪ್ರಿಯ ಕಾರ್ಯಕ್ರಮಗಳನ್ನು ಪ್ರತಿ ಮನೆ ಮನೆಗೆ ತಲಪುವ ಉದ್ದೇಶದಿಂದ ಗೂಳೂರು ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಆದ್ದರಿಂದ ಪ್ರತಿಯೊಬ್ಬ
ಕರ‍್ಯಕರ್ತರು ದಿನದ ೩ ಗಂಟೆ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನ ಹಾಗೂ ಜನಪ್ರಿಯ ಯೋಜನೆಗಳನ್ನು ಜನರಿಗೆ ನೇರವಾಗಿ ತಲುಪಲು ಕಾರ್ಯಕರ್ತರು ಸರ್ಕಾರ ಹಾಗೂ ಜನರ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಪ್ರತಾಪ್, ಮಂಡಲ ಉಪಾಧ್ಯಕ್ಷರಾದ ಶ್ರೀನಿವಾಸ ಗುಡಿಬಂಡೆ ಮಂಡಲ ಅಧ್ಯಕ್ಷರಾದ ಗಂಗಿರೆಡ್ಡಿ, ಕೆ.ಡಿ.ಪಿ ಸದಸ್ಯರಾದ ವೆಂಕಟೇಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಬಿ ಎಸ್ ಲೋಕೇಶ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ, ಪ್ರಭಾಕರ್ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ರೆಡ್ಡಿ, ಚನ್ನ ಕೃಷ್ಣಪ್ಪ, ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರಪ್ಪ, ಎಸ್ಸಿ ಮೋರ್ಚಾದ ಅಧ್ಯಕ್ಷರಾದ ವೆಂಕಟರಮಣಪ್ಪ, ಗೂಳೂರು ರಂಗಾರೆಡ್ಡಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ನಿರ್ಮಲಮ್ಮ, ಮಹಿಳಾ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ವೆಂಕಟಲಕ್ಷ್ಮಮ್ಮ, ಮೋರ್ಚಾದ ಪದಾಧಿಕಾರಿಗಳಾದ ಮಂಜುಳಮ್ಮ, ಗಂಗುಲಮ್ಮ, ವನಜ ಮತ್ತು ಪಕ್ಷದ ಮುಖಂಡರು ಹಾಗೂ ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ:-ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ

error: