ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಅರ್ಹ ರೈತ ಫಲಾನುಭವಿಗಳಿಗೆ ೨೦೧೬- ೧೭ ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಪಂಪ್ ಸೆಟ್ ಹಾಗೂ ಪೂರಕ ಸಾಮಗ್ರಿಗಳನ್ನು ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವಿತರಿಸಿದರು.
ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡ ರೈತರನ್ನು ಗುರುತಿಸಿ ಸರ್ಕಾರ ಪ್ರತಿ ವರ್ಷ ಫಲಾನುಭವಿ ರೈತರಿಗೆ ಉಚಿತವಾಗಿ ಪಂಪ್ ಮೋಟರ್, ಪೈಪು ಮತ್ತು ಕೇಬಲ್ಗಳನ್ನು ನೀಡುತ್ತಿದೆ. ಎಂದಿನAತೆ ಈ ಬಾರಿಯೂ ತಾಲ್ಲೂಕಿನ ಅರ್ಹ ೨೬ ಫಲಾನುಭವಿಗಳಿಗೆ ಉಚಿತ ಪಂಪಸೆಟ್ ಹಾಗೂ ಪರಿಕರಗಳನ್ನು ನೀಡುತ್ತಿದ್ದು, ರೈತರು ಸರ್ಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಪಂಚಾಯತಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ಕಾಂಗ್ರೆಸ್ ಹಿರಿಯ ಮುಖಂಡ ಗುಂಡ್ಲಪಲ್ಲಿ ಸತೀಶ್ ರೆಡ್ಡಿ ,ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಎಲ್.ಎನ್.ಸ್ವಾಮಿ, ಹಾಗೂ ಜಯರಾಮ ಡಿ.ಎಂ ಜಿಲ್ಲಾ ವ್ಯವಸ್ಥಾಪಕರು ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್