ಬಾಗೇಪಲ್ಲಿ:- ಪರಿಸರ ರಕ್ಷಣೆ ನಿಟ್ಟಿನಲ್ಲಿ ಇಲ್ಲಿನ ಬಾಗೇಪಲ್ಲಿ ಪಟ್ಟಣದ ಪುರಸಭೆ ಅಧಿಕಾರಿಗಳಾದ ಪರಿಸರ ಅಭಿಯಂತರರು ನಮಸ್ಕ್ರತ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆಗೆ ಪಟ್ಟಣದಲ್ಲಿರುವ ಬೇಕರಿ, ಕಿರಾಣಿ ಅಂಗಡಿ, ಬಟ್ಟೆ ವ್ಯಾಪಾರದ ಅಂಗಡಿ ಹಾಗೂ ವಿವಿಧ ವ್ಯಾಪಾರದ ಅಂಗಡಿಗಳ ಮೇಲೆ ದಾಳಿ ನಡೆಸಿ ಅಂಗಡಿ ಮಾಲೀಕರಿಂದ ಸ್ಥಳದಲ್ಲಿಯೇ ಸುಮಾರು ೪೬ ಕೆಜಿ ಪ್ಲಾಸ್ಟಿಕ್ ಹಾಗೂ ಮಾಸ್ಕ್ ಧರಿಸಿದ ಗ್ರಾಹಕರಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಹಣ ವಸೂಲಿ ಮಾಡಿದ್ದಾರೆ.
ಪುರಸಭೆ ಪರಿಸರ ಅಭಿಯಂತರರು ನಮಸ್ಕ್ರತ ರವರು ಅಂಗಡಿ ಮಾಲೀಕರು ಇನ್ನು ಮುಂದೆ ಅಂಗಡಿಗಳಿಗೆ ಭೇಟಿ ನೀಡಿದಾಗ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ, ಅಂಗಡಿಗಳ ವ್ಯಾಪಾರ ಪರವಾನಗಿ ರದ್ದುಪಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಮಸ್ಕ್ರತ ಹಾಗೂ ಪುರಸಭೆ ಸಿಬ್ಬಂದಿಗಳಾದ ಅಮರನಾರಾಯಣ,ಜಾವಿದ್,ಶ್ರೀರಾಮ, ಶಿವಪ್ಪ ಇನ್ನೂ ಮುಂತಾದವರು ಉಪಸ್ಥಿತರಿದರು.
ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್