May 17, 2024

Bhavana Tv

Its Your Channel

ವಸತಿ ರಹಿತರಿಗೆ ನಿವೇಶನಗಳನ್ನು ವಿತರಣೆ ಮಾಡಲು ಸೂಕ್ತ ಜಮೀನನ್ನು ಗುರ್ತಿಸಿ-ಶಾಸಕ ಸುಬ್ಬಾರೆಡ್ಡಿ

ಬಾಗೇಪಲ್ಲಿ : ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಕಂದಾಯ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ,ಜಮೀನನ್ನು ಗುರ್ತಿಸಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕಂದಾಯ ಅಧಿಕಾರಿಗಳಿಗೆ ಕರೆ ನೀಡಿದರು.

ಅವರು ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ, ತಾಲ್ಲೂಕಿನ ಪಾತಪಾಳ್ಯ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ವಸತಿ ರಹಿತರಿಗೆ ನಿವೇಶನಗಳನ್ನು ನೀಡಲು ಅಗತ್ಯವಿರುವ ಜಮೀನನ್ನು ಗುರುತಿಸಲು ಹಾಗೂ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದರು.
ಇAತಹ ನಿವೇಶನಗಳನ್ನು ಅರ್ಹ ಬಡವರಿಗೆ,ನಿರ್ಗತಿಕರಿಗೆ, ವಿಧವೆಯರಿಗೆ ಒಟ್ಟಾರೆ ವಸತಿರಹಿತರಿಗೆ ನೀಡಲು ವ್ಯವಸ್ಥೆ ಮಾಡಬೇಕು ಎಂದರು. ತಹಸೀಲ್ದಾರ್ ಡಿ.ಎ.ದಿವಾಕರ್ ಮಾತನಾಡಿ, ಶಾಸಕರು ಹೇಳಿರುವಂತೆ ವಸತಿ ರಹಿತರಿಗೆ ನಿವೇಶನಗಳನ್ನು ನೀಡಲು ಸೂಕ್ತ ಜಮೀನುಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇ.ಓ. ಮಂಜುನಾಥ್, ಪಾತಪಾಳ್ಯ ಹೋಬಳಿ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೆಪಲ್ಲಿ

error: