May 17, 2024

Bhavana Tv

Its Your Channel

‘ಸಹೋದರತ್ವ ಭಾವದಿಂದ ಸಮಾಜದಲ್ಲಿ ಶಾಂತಿ’

ವರದಿ: ಗೋಪಾಲ ರೆಡ್ಡಿ ಬಾಗೆಪಲ್ಲಿ

ಬಾಗೇಪಲ್ಲಿ:- ವಿಶ್ವ ಭ್ರಾತೃತ್ವದ ಮೂಲಕ ಸಮಾಜದಲ್ಲಿ ಎಲ್ಲರನ್ನು ಅಣ್ಣ ತಮ್ಮಂದಿರAತೆ ನೋಡಿದಾಗ ಮಾತ್ರ ಶಾಂತಿ ಸಿಗಲು ಸಾಧ್ಯ’ ಎಂದು ಬಾಗೇಪಲ್ಲಿ ತಾಲ್ಲೂಕು ಬಿಜೆಪಿ ಮಂಡಲಾದ್ಯಕ್ಷ ಆರ್ ಪ್ರತಾಪ್ ಅಭಿಪ್ರಾಯಪಟ್ಟರು.

ಅವರು ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಬಿಜೆಪಿ ಕಚೇರಿಯಲ್ಲಿ ಶನಿವಾರ ಬಿಜೆಪಿ ಪಕ್ಷದ ಮಹಿಳಾ ಯುವಮೊರ್ಚಾ ಹಮ್ಮಿಕೊಂಡಿದ್ದ ರಕ್ಷಾ ಬಂಧನ ಆಚರಣೆಯಲ್ಲಿ ಮಾತನಾಡಿದರು
ನಾವೆಲ್ಲಾ ಭಾರತೀಯರು ವಿದೇಶಿಯರ ಅನುಕರಣೆಯಿಂದ ನಮ್ಮ ನಿಜವಾದ ಸಂಸ್ಕೃತಿಯನ್ನು ಮರೆತು ಸ್ನೇಹ ಅತ್ಮೀಯತೆಯಿಂದ ದೂರ ಹೋಗುತ್ತಿದ್ದೇವೆ. ಇಂದಿನ ಯುವ ಪೀಳಿಗೆ `ಪ್ರೇಮಿಗಳ ದಿನ’ಕ್ಕೆ ಮಹತ್ವವನ್ನು ನೀಡುತ್ತಿದೆಯೇ ಹೊರತು ಸಹೋದರತ್ವದ ಪವಿತ್ರ ಭಾವನೆಯನ್ನು ಬೆಳೆಸುವ ಸ್ನೇಹದ ಸೂಚಕವಾದ ರಕ್ಷಾಬಂಧನಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಮಹತ್ವ ಇದೆ. ರಕ್ಷಾ ಬಂಧನ ಸೋದರ ಬಾಂಧವ್ಯ ಬೆಸೆಯುವ ಪವಿತ್ರ ಹಬ್ಬವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಕೆಡಿಪಿ ಸದಸ್ಯರಾದ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಗೋಪಾಲ,ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯಕಾರಿಣಿ ಸದಸ್ಯೆ ನಿರ್ಮಲಮ್ಮ,ಮಂಜುಳಾ,ವನಜಾ, ರಮಾ ದೇವಿ, ರೂಪಾ,ಗಂಗುಲಮ್ಮ,ರಮೇಶ್,ಮಲ್ಲಿಕಾರ್ಜುನ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

error: