ಬಾಗೇಪಲ್ಲಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಾಗೇಪಲ್ಲಿ ಪಟ್ಟಣದ ಗೀತಾಮಂದಿರ ಭವನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬಾಗೇಪಲ್ಲಿ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಪಿ.ಜಿ. ಗಿರೀಶ್ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ಚಿಂತಾಮಣಿ ಕಲಾವಿದರು ಕಾರ್ಯಕ್ರಮದಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಸ್ವಚ್ಛತೆ, ಬಾಲ್ಯ ವಿವಾಹ, ದುಶ್ಚಟ ಮುಕ್ತ ಜೀವನ, ಆರೋಗ್ಯ, ಕಾನೂನಿನ ಹಾಗೂ ಕರೋನ ಲಸಿಕೆ ಬಗ್ಗೆ ಚಿಂತಾಮಣಿ ಕಲಾತಂಡದವರು ಹಾಡುಗಳ ಮುಖಾಂತರ ನೆರೆದ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅದ್ಯಕ್ಷ ಬಿ.ಆರ್.ನರಸಿಂಹ ನಾಯ್ಡು, ಶ್ರೀಮತಿ ಸುಜಾತ ನರಸಿಂಹ ನಾಯ್ಡು, ಸಮಾಜ ಸೇವಕ ಹಾಗೂ ಬಿಳ್ಳೂರು ಆಂಜನೇಯ ಸ್ವಾಮಿ ಟ್ರಸ್ಟ್ ಅದ್ಯಕ್ಷ ಬಿಳ್ಳೂರು ಕೆ.ಎಂ.ನಾಗರಾಜು, ಕೃಷಿ ಅಧಿಕಾರಿ ಧನಂಜಯ ಮೂರ್ತಿ, ಸಾರಮ್ಮ ,ಗಾಯತ್ರಿ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.
ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್