ಬಾಗೇಪಲ್ಲಿ : ಪಟ್ಟಣದ ಪುರಸಭೆಗೆ ಪ್ರಭಾರಿ ಅಧ್ಯಕ್ಷರಾಗಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಎ. ಶ್ರೀನಿವಾಸ್ ರವರು ಇಂದು ಅಧಿಕಾರ ವಹಿಸಿಕೊಂಡರು.
ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬಿ.ಸಿ.ಎಂ. (ಎ) ಮಹಿಳಾ ಪ್ರವರ್ಗಕ್ಕೆ ಮೀಸಲಾತಿ ಬಂದು, ಕಳೆದ ಒಂಬತ್ತು ತಿಂಗಳ ಹಿಂದೆ ಅಧ್ಯಕ್ಷರಾಗಿ ಗುಲ್ನಾಜ್ ಬೇಗಂ ಅಧಿಕಾರ ಸ್ವೀಕರಿಸಿದ್ದರು.
ಆದರೆ ವಿವಿಧ ಕಾರಣಗಳಿಂದ ಅಧ್ಯಕ್ಷರಾಗಿದ್ದ ಗುಲ್ನಾಜ್ ಬೇಗಂ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಉಪ ವಿಭಾಗಾಧಿಕಾರಿಗಳು ಅಂಗೀಕರಿಸಿದ್ದರು. ಇದರಿಂದ ಅಧ್ಯಕ್ಷೆಯ ವಿರುದ್ದ ಮಂಡಿಸಿದ್ದ ಸಾಮಾನ್ಯ ಸಭೆಯನ್ನು ರದ್ದುಪಡಿಸಿ ಮುಖ್ಯಾಧಿಕಾರಿ ಕೆ.ಮಧುಕರ್ ಆದೇಶ ಹೊರಡಿಸಿದ್ದು, ಪ್ರಕರಣ ಸುಖಾಂತ ಕಂಡಿದೆ.
ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಪ್ರಭಾರಿಯಾಗಿ ಉಪಾಧ್ಯಕ್ಷ ಎ. ಶ್ರೀನಿವಾಸರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಸದಸ್ಯರಾದ ಶ್ರೀನಿವಾಸರೆಡ್ಡಿ, ನಂಜುAಡಪ್ಪ, ಅಶೋಕರೆಡ್ಡಿ, ಜಬಿವುಲ್ಲಾ, ಪದ್ಮ ಮಲ್ಲೇಶ್, ಶ್ರೀನಾಥ್ ಮತ್ತಿತರೆ ಸದಸ್ಯರು ಅಧಿಕಾರಿಗಳು ಹಾಜರಿದ್ದರು.
ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್