ಬಾಗೇಪಲ್ಲಿ ಪಟ್ಟಣಕ್ಕೆ ಎಚ್.ಎನ್ ವ್ಯಾಲಿಯ ಕೊಚ್ಚೆ ನೀರು ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣದ) ತಾಲ್ಲೂಕು ಅಧ್ಯಕ್ಷ ಕೆ.ಎನ್.ಹರೀಶ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಮಂಗಳವಾರ ಪುರಸಭೆ ಮುಂದೆ ಪ್ರತಿಭಟನೆ ಮಾಡಿದರು.
ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಹೊರಟ ಪ್ರತಿಭಟನಾಕಾರರು, ಮುಖ್ಯರಸ್ತೆಯಲ್ಲಿ ಸಂಚರಿಸಿ ಪಟ್ಟಣಕ್ಕೆ ಕೊಚ್ಚೆ ನೀರು ಹರಿಯುತ್ತಿರುವ ಪುರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನಾ ಮೆರವಣಿಗೆ ಮಾಡಿದರು.
ಕರವೇ (ನಾರಾಯಣಗೌಡ ಬಣ)ದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಹರೀಶ್ ಮಾತನಾಡಿ, ಎಚ್.ಎನ್.ವ್ಯಾಲಿಯ ಕೊಚ್ಚೆ ನೀರು ರಾಮಸಮುದ್ರದ ಮೂಲಕ ಕೆರೆಗಳ ಮೂಲಕ ಚಿತ್ರಾವತಿ ಬ್ಯಾರೇಜಿಗೆ ಹರಿದಿದ್ದು, ಪಟ್ಟಣ ಪ್ರದೇಶಗಳ ವಾರ್ಡ್ಗಳಿಗೆ ಇದೇ ನೀರು ಸರಬರಾಜು ಮಾಡಲಾಗಿದೆ. ಕೊಚ್ಚೆಯ ನೀರು ಸಂಪ್ ಗಳಿಗೆ ಹರಿದಿದ್ದು, ಕುಡಿಯಲು ಅಲ್ಲದೇ ಗೃಹಬಳಕೆಗೆ ಆಗುತ್ತಿಲ್ಲ. ನೀರು ದುರ್ನಾತದಿಂದ ಕೂಡಿದ್ದು, ಮನೆಗಳಲ್ಲಿ ಜನರು ಮೂಗು ಮುಚ್ಚಿಕೊಂಡು ಇರಬೇಕಾಗಿದೆ. ಕೊಚ್ಚೆಯ ನೀರು ಮನೆಗಳಿಗೆ ಹರಿದಿದ್ದರೂ, ಪುರಸಭೆ ಅಧಿಕಾರಿಗಳು ನೀರನ್ನು ಸಂಸ್ಕರಣೆ ಮಾಡದೇ ಹಾಗೆಯೇ ಮನೆಗಳಿಗೆ ನೀರು ಸರಬರಾಜು ಮಾಡಿರುವುದು ಖಂಡನೀಯವಾಗಿದೆ. ಕೂಡಲೇ ಶುದ್ಧವಾದ ಕುಡಿಯುವ ನೀರನ್ನು ವಾರ್ಡ್ಗಳಿಗೆ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಕೆ.ಎ.ಮಧುಕರ್ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ಪ್ರತಿಕ್ರಿಯಿಸಿದ ಅವರು ಎಚ್.ಎನ್.ವ್ಯಾಲಿಯ ನೀರನ್ನು ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡುತ್ತಿದೆ. ಈ ನೀರನ್ನು ನಿರಂತರವಾಗಿ ಪ್ರಾಯೋಗಿಕ ಪರೀಕ್ಷೆಯ ವರದಿಗೆ ಕಳುಹಿಸಲಾಗಿದೆ. ಇದುವರಿಗೂ ವರದಿ ಬಂದಿಲ್ಲ. ಜನರು ಯಾವುದೇ ಊಹಪೋಹಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದಾಗ, ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಕರವೇ ತಾಲ್ಲೂಕು ಪ್ರಧಾನಕಾರ್ಯದರ್ಶಿ ರಿಯಾಜ್ಉಲ್ಲಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೇಖರಾಚಾರಿ, ತಾಲ್ಲೂಕು ಮಹಿಳಾ ಅಧ್ಯಕ್ಷೆ ಶಾಂತಮ್ಮ, ಪ್ರಧಾನ ಸಂಚಾಲಕ ನಟರಾಜ್, ಖಜಾಂಚಿ ನಾರಾಯಣಸ್ವಾಮಿ, ಸಂಚಾಲಕ ಶಿವಕುಮಾರ್, ಮುಖಂಡರಾದ ಮಂಜುನಾಥ್ನಾಯಕ, ಆಂಜಿ, ಕೃಷ್ಣಪ್ಪ, ವೆಂಕಟೇಶ್, ಶ್ರೀನಿವಾಸ್, ಇಮಾಂಸಾಬ್, ನಾರಾಯಣಸ್ವಾಮಿ, ಗಣೇಶ್, ನಿತೀನ್, ಮಂಜುನಾಥ ಇದ್ದರು.
ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ
.
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್