ಜಮಖಂಡಿ ; ದಿನಾಂಕ 05-03-2020 ರಂದು ಬಾಗಲಕೋಟ ಜಿಲ್ಲೆಯ ಜಮಖಂಡಿಯ ಬಿ.ಎಲ್.ಡಿ.ಇ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ್ತ್ರ ಮತ್ತು ಬಿ.ಎ ಪದವಿ ವಿದ್ಯಾರ್ಥಿಗಳಿಂದ ಸಮೀಪದ ಕಡಪಟ್ಟಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ರಾಜ್ಯಶಾಸ್ತ್ರದಲ್ಲಿ ರಾಜಕೀಯ ಮತ್ತು ಆಡಳಿತ ಕುರಿತು ವ್ಯವಸ್ಥಿತ ಅಧ್ಯಯನ ಅನಿವಾರ್ಯವಾಗಿದೆ. ಆದ್ದರಿಂದ ಈ ರೀತಿಯಾದ ಪ್ರಾಯೋಗಿಕ ಅಧ್ಯಯನಗಳು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಕಡಪಟ್ಟಿ ಗ್ರಾಮ ಪಂಚಾಯಿತಿ ಪಿ.ಡಿ.ಓ ಅಧಿಕಾರಿಯಾದ ಬಿ.ಎನ್.ನಾಟಿಕಾರ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸವರಾಜ ಇಟ್ಟಿ ಅವರ ಜೊತೆ ಚರ್ಚಿಸಲಾಯಿತು. ಈ ಚರ್ಚೆಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಶಿವಾನಂದ ಜಾಮಗೌಡ, ಮಂಜು ಹೊಸಮನಿ, ಭಾಗ್ಯಶ್ರೀ ಕಮಲದಿನ್ನಿ ಹಾಗೂ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಮಯದಲ್ಲಿ ಪ್ರಾಧ್ಯಾಪಕರಾದ ಎಲ್.ಎಂ.ಮರಕಪನಳ್ಳಿ ಸ್ವಾಗತಿಸಿದರು, ಡಾ.ಎಸ್.ಎಂ.ಬಿಜಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್.ಬಿ.ಮಿಶನವರ ವಂದಿಸಿದರು. ಪ್ರಾಧ್ಯಾಪಕರಾದ ಪ್ರಭು ಆಪ್ಪನವರ, ಎಸ್.ಆಯ್.ಬಿರಾದಾರ, ಎಂ.ಜಿ.ಮಠಪತಿ ಮೇಡಂ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಯಮನೂರ ಇಟ್ಟಿ ಉಪಸ್ಥಿತರಿದ್ದರು.
ವರದಿ: ರಮೇಶ ಇಟಗೋಣಿ
ರಬಕವಿ-ಬನಹಟ್ಟಿ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.