![](https://kannada.bhavanatv.com/wp-content/uploads/2020/03/10-HNR-01-1Sanvi-1024x512.jpg?v=1583897095)
ಹೊನ್ನಾವರ: ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವ ರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದ ಹೊನ್ನಾವರ ತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ ‘ಶ್ರೀಶಾರದಾ ಜ್ಞಾನಸುಧಾರಸಪ್ರಶ್ನೆ’ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹೊನ್ನಾವರದ ವಿನುತಾ ಭಟ್ ಹಾಗೂ ಜಗದೀಶರಾವ್ ಬಿ.ಎಸ್. ಅವರ ಪುತ್ರಿ ಸಾನ್ವಿರಾವ್ಗೆ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿಶೇಷ ಪುರಸ್ಕಾರ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಛಾತ್ರಾ ವಿಭಾಗದ ಸಂಧ್ಯಾಕಾನತ್ತೂರು, ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯ ಪ್ರಕಾಶ ಹೆಗಡೆ ಹಾನಬಿ ಮುಂತಾದವರು ಉಪಸ್ಥಿತರಿದ್ದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.