
ಹೊನ್ನಾವರ: ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವ ರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದ ಹೊನ್ನಾವರ ತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ ‘ಶ್ರೀಶಾರದಾ ಜ್ಞಾನಸುಧಾರಸಪ್ರಶ್ನೆ’ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹೊನ್ನಾವರದ ವಿನುತಾ ಭಟ್ ಹಾಗೂ ಜಗದೀಶರಾವ್ ಬಿ.ಎಸ್. ಅವರ ಪುತ್ರಿ ಸಾನ್ವಿರಾವ್ಗೆ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿಶೇಷ ಪುರಸ್ಕಾರ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಛಾತ್ರಾ ವಿಭಾಗದ ಸಂಧ್ಯಾಕಾನತ್ತೂರು, ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯ ಪ್ರಕಾಶ ಹೆಗಡೆ ಹಾನಬಿ ಮುಂತಾದವರು ಉಪಸ್ಥಿತರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.