ಶಿರಸಿ: ಶರಾವತಿ ಅಭಯಾರಣ್ಯಕ್ಕೆ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಹೆಬ್ರೆ, ಬುಗುಡಿ, ಹೊಸೂರು ಹೀಗೆ ೩ ಗ್ರಾಮಗಳ ಸುಮಾರು ೫೪೯.೯೭ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಸೇರ್ಪಡೆಗೊಳಿಸಿದ ಕುರಿತು ಅಭಯಾರಣ್ಯ ಜಾಗೃತ ಕಾರ್ಯಕ್ರಮವನ್ನು ಶಾಂಭವಿ ಸಭಾಭವನ, ರಾಗಿಹೊಸಳ್ಳಿಯಲ್ಲಿ ಫೆ. ೯ ರವಿವಾರ ಮುಂಜಾನೆ ೧೦.೦೦ ಗಂಟೆಗೆ ಸಂಘಟಿಸಲಾಗಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಂಡಲ ಗ್ರಾಮ ಪಂಚಾಯತ ಅಧ್ಯಕ್ಷ ದೇವರಾಜ ಮರಾಠಿ ವಹಿಸಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಬೇಕೆಂದು ತಾಲೂಕಾ ಸಂಚಾಲಕ ಬಾಬು ಮರಾಠಿ ಮುಂಡಗಾರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ