![](https://kannada.bhavanatv.com/wp-content/uploads/2020/02/ravindraa.naik_.jpg)
ಶಿರಸಿ: ಶರಾವತಿ ಅಭಯಾರಣ್ಯಕ್ಕೆ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಹೆಬ್ರೆ, ಬುಗುಡಿ, ಹೊಸೂರು ಹೀಗೆ ೩ ಗ್ರಾಮಗಳ ಸುಮಾರು ೫೪೯.೯೭ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಸೇರ್ಪಡೆಗೊಳಿಸಿದ ಕುರಿತು ಅಭಯಾರಣ್ಯ ಜಾಗೃತ ಕಾರ್ಯಕ್ರಮವನ್ನು ಶಾಂಭವಿ ಸಭಾಭವನ, ರಾಗಿಹೊಸಳ್ಳಿಯಲ್ಲಿ ಫೆ. ೯ ರವಿವಾರ ಮುಂಜಾನೆ ೧೦.೦೦ ಗಂಟೆಗೆ ಸಂಘಟಿಸಲಾಗಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಂಡಲ ಗ್ರಾಮ ಪಂಚಾಯತ ಅಧ್ಯಕ್ಷ ದೇವರಾಜ ಮರಾಠಿ ವಹಿಸಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಬೇಕೆಂದು ತಾಲೂಕಾ ಸಂಚಾಲಕ ಬಾಬು ಮರಾಠಿ ಮುಂಡಗಾರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.