
ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ದಂತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ|| ಅನುರಾಧ ರವರಿಗೆ ಅತ್ಯುತ್ಯಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು (“Outstanding Achievement Award”) ಲಭಿಸಿದೆ. ರಾಜ್ಯ ಮಟ್ಟದಲ್ಲಿ ಸರ್ಕಾರಿ ಸೇವೆಯಲ್ಲಿರುವ ದಂತ ವೈದ್ಯರುಗಳಲ್ಲಿ ಒಟ್ಟು ಏಂಟು ಮಂದಿ ದಂತ ವೈದ್ಯರನ್ನು “ಅತ್ಯುತ್ತಮ ಸಾಧಕರು” ಎಂದು ಗುರುತಿಸಲಾಗಿದ್ದು ಅವರಲ್ಲಿ ಡಾ|| ಅನುರಾಧರವರು ಒಬ್ಬರಾಗಿರುವುದು ತಾಲೂಕಾ ಆಸ್ಪತ್ರೆ ಹೊನ್ನಾವರಕ್ಕೆ, ಜಿಲ್ಲೆಯ ಆರೋಗ್ಯ ಇಲಾಖೆಗೆ ಹೆಮ್ಮೆ ತರುವ ವಿಷಯವಾಗಿದೆ.

ಇತ್ತೀಚ್ಚಿಗೆ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಧಾರವಾಡದಲ್ಲಿ ನಡೆದ “ರಾಜ್ಯ ಮಟ್ಟದ ದಂತ ವೈದ್ಯಾಧಿಕಾರಿಗಳ ಸಮ್ಮೇಳನ – ದಂತ ಮಂಥನ “ ಕಾರ್ಯಕ್ರಮದಲ್ಲಿ ಡಾ ಅನುರಾಧ ರವರಿಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ ನೀಡಿ ಗೌರವಿಸಲಾಯಿತು ಪ್ರಶಸ್ತಿ ಪಡೆದ ಡಾ|| ಅನುರಾಧರವರನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾ ಡಾ|| ರಾಜೇಶ ಕಿಣಿ ಸೇರಿದಂತೆ ಎಲ್ಲ ವೈದ್ಯಾಧಿಕಾರಿಗಳು, ಮತ್ತು ಆಸ್ಪತ್ರೆಯ ಸಿಬ್ಬಂಧಿಗಳು, ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಶೇಖರ ಕಳಸ ರವರು ಅಭಿನಂದನೆ ತಿಳಿಸಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು