
ಕೊಡಗು :ಮೀಸಲು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಪ್ರವೇಶ ಮಾಡಿ ಕಡವೆಯೊಂದನ್ನು ಭೇಟೆ ಮಾಡಿದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ದುಬಾರೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಭೇಟೆ ಮಾಡಿ ಸ್ಥಳದಲ್ಲೇ ಮಾಂಸ ಮಾಡಿ ಹೊಸಪಟ್ಟಣ ಮೂಲಕ ಬರುತ್ತಿದ್ದ ಸಂದರ್ಭದಲ್ಲಿ ಗಸ್ತಿನಲ್ಲಿ ಇದ್ದ ಅರಣ್ಯ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದು 10 ಕೆಜಿ ಕಡವೆ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜರಾಯಪಟ್ಟಣ ಸಮೀಪದ ಹೊಸಪಟ್ಟಣ ನಿವಾಸಿಗಳಾದ ಮಹೇಶ್, ವಿಶ್ವನಾಥ್ ಮತ್ತು ಚಂದ್ರಶೇಖರ ಎಂಬ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿ ಗಳು ಯಶಸ್ವಿಯಾಗಿದ್ದಾರೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ