
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ ಅನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ತತ್ಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಹೊರರೋಗಿ ವಿಭಾಗಗಳನ್ನು ಬೆಳಿಗ್ಗೆ ೮.೩೦ರಿಂದ ಮಧ್ಯಾಹ್ನ ೧.೦೦ರ ನಡುವೆ ಮಾತ್ರ ಕಾರ್ಯನಿರ್ವಹಿಸಲು ನಿರ್ಧರಿಸಿದೆ. ವೈದ್ಯಕೀಯ ತುರ್ತು / ಎಮರ್ಜೆನ್ಸಿ ಸೇವೆಗಳಿಗಾಗಿ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಈ ಮೂಲಕ ಸೂಚಿಸಲಾಗಿದೆ. ಎಲ್ಲಾ ಪೂರ್ವ ನಿಯೋಜಿತ ಭೇಟಿಗಳನ್ನು ಮುಂದೂಡಬೇಕು ಎಂದೂ ಈ ಮೂಲಕ ಸೂಚಿಸಲಾಗಿದೆ.
ಒಳ ರೋಗಿಗಳೊಂದಿಗೆ ಒಬ್ಬರಿಗೆ ಮಾತ್ರ ಇರಲು ಅವಕಾಶ ಕಲ್ಪಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನAತೆ ಕಾರ್ಯನಿರ್ವಹಿಸಲಿದೆ. ಹಿರಿಯ ನಾಗರಿಕರು ಮತ್ತು ಮಕ್ಕಳು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ವಿನಂತಿಸಲಾಗಿದೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು