
ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಓಡಾಡುವವರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನ ನೋಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ನಿನ್ನೆ ಖಡಕ್ ಎಚ್ಚರಿಕೆಯನ್ನು ನೀಡಿದ್ದರು. ಆದರೂ ಕೆಲವರು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದ ಕಾರಣ, ರಸ್ತೆ ಮೇಲೆ ಓಡಾಟ ನಡೆಸುವವರ ವಿರುದ್ಧ ಜಿಲ್ಲಾಡಳಿತ ಇನ್ನಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ.
ಮೊದಲ ಬಾರಿಗೆ ವ್ಯಕ್ತಿ ಮನೆಯಲ್ಲಿ ಇರದೇ ಆದೇಶ ಉಲ್ಲಂಘಿಸಿದರೆ ಆತನಿಗೆ ಅಳಿಸಲಾಗದ ಶಾಹಿಯಿಂದ ಕೈಗೆ ವಿದೇಶದಿಂದ ಬಂದಾಗ ವಿಮಾನ ನಿಲ್ದಾಣದಲ್ಲಿ ಹಾಕುವ ಮುದ್ರೆ ಮಾದರಿಯಲ್ಲಿ ಮುದ್ರೆಹಾಕುವ ಕ್ರಮಕ್ಕೆ ಮುಂದಾಗಿದೆ.
ಎರಡನೇ ಬಾರಿಗೆ ಅದೇ ವ್ಯಕ್ತಿ ಮುದ್ರೆ ಹಾಕಿದ ನಂತರವೂ ಆದೇಶ ಉಲ್ಲಂಘಿಸಿದರೆ ಆತ ವಾಸಿಸುವ ವಸತಿ ಪ್ರದೇಶದಲ್ಲಿ ಅತನ ಹೆಸರನ್ನು ಸಾರ್ವಜನಿಕ ಪ್ರಕಟಣೆ ಮೂಲಕ ಘೋಷಿಸುವ ಕ್ರಮಕ್ಕೆ ಮುಂದಾಗಿದೆ.
ಮೂರನೇ ಬಾರಿಗೆ ಅದೇ ವ್ಯಕ್ತಿ ಆದೇಶ ಉಲ್ಲಂಘಿಸಿದರೆ ಜಿಲ್ಲಾಡಳಿತದ ವೆಬ್ ಸೈಟ್ ನಲ್ಲಿ ಆತನ ಫೋಟೋ ಹಾಕಿ ಜೊತೆಗೆ, ಸಾರ್ವಜನಿಕ ಸ್ಥಳದಲ್ಲಿ ಉಲ್ಲಂಘನೆ ಮಾಡಿದವರ ಫೋಟೋ ಹಾಕಿ ಪ್ರಕಟಣೆ ಮಾಡುವ ಕ್ರಮಕ್ಕೆ ಇದೀಗ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಮುಂದಾಗಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು