
ಅಂಕೋಲಾ: ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಆದರೂ ಕೆಲವರು ಮನೆ ಬಿಟ್ಟು ಹೊರ ಬರುತ್ತಿದ್ದಾರೆ. ತಾಲೂಕಿನ ಕಂಚಿನಬಾಗಿಲು ಬಳಿ ಮನೆಯಿಂದ ಹೊರಬಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾಕ್ ಡೌನ್ ವೇಳೆ ರಸ್ತೆಗೆ ಅನವಶ್ಯಕವಾಗಿ ಬರದೇ ಮನೆಯಲ್ಲಿಯೇ ಇದ್ದಿದ್ದರೇ ಇಬ್ಬರ ಪ್ರಾಣವೂ ಉಳಿಯುತ್ತಿತ್ತು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಬಡಗೇರಿ ಗ್ರಾಮದ ಮುವತ್ತು ವರ್ಷದ ನಾಗರಾಜ್ ಲಕ್ಷ್ಮಣ್ ಗೌಡ ಹಾಗೂ ಇಪ್ಪತ್ತೊಂಬತ್ತು ವರ್ಷದ ಬಾಳಾ ಮಾನು ಗೌಡ ಮೃತರಾಗಿದ್ದಾರೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಹೋಗುವಾಗ ಅಪರಿಚಿತ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದು ಸ್ಥಳಕ್ಕೆ ಅಂಕೋಲಾ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ