
ಕುಮಟಾ: ಸಂತೆ ಮಾರುಕಟ್ಟೆಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆಯ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಬುಧವಾರದ ಸಂತೆಯಲ್ಲಿ ನಡೆದಿದೆ.
ಪ್ಲಾಸ್ಟಿಕ್ ಚೀಲಗಳ ನಿಷೇಧವಿದ್ದರೂ ವಾರದ ಸಂತೆಯಲ್ಲಿ ಹೇರಳವಾಗಿ ಪ್ಲಾಸ್ಟಿಕ್ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಮ್.ಕೆ ತಂಡ, ಸಂತೆ ಮಾರುಕಟ್ಟೆಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಮ್.ಕೆ., ಅಧಿಕಾರಿಗಳಾದ ಮಹೇಂದ್ರ, ಸಿಬ್ಬಂದಿಗಳಾದ ಸುಧೀರ ಗೌಡ, ಗೋವಿಂದ ಗೌಡ, ಚೇಲುವರಾಜ ಸೇರಿದಂತೆ ಪೌರ ಕಾರ್ಮಿಕರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.