ಬೆಂಗಳೂರು / ಯಲ್ಲಾಪುರ-ಮುಂಡಗೋಡ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ವಿಧಾನಸಭೆಗೆ ಪುನರಾಯ್ಕೆಯಾಗಿದ್ದ
ಶಾಸಕ ಶಿವರಾಮ ಹೆಬ್ಬಾರ ಗುರುವಾರ ಸಂಪುಟ ಸಚಿವರಾಗಿ #ಪ್ರಮಾಣವಚನ #ಸ್ವೀಕರಿಸಿದರು.
ಅವರಿಗೆ ಯಾವ ಖಾತೆ ಒಲಿದು ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದ ಬಳಿಕ ಶಿವರಾಮ ಹೆಬ್ಬಾರ ಅವರು ಫೇಸಬುಕ್ ನಲ್ಲಿ ಮಾತುಗಳು ;- ಸಚಿವ ಸ್ಥಾನದ
ಗೌರವಕ್ಕೆ ಕಾರಣರಾಗಿರುವ ನನ್ನ ಕ್ಷೇತ್ರದ ಜನತೆ, ನನ್ನನ್ನು ಸದಾ ಬೆಂಬಲಿಸಿ ಬೆಳೆಸಿದ ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ನನ್ನ ಧನ್ಯವಾದಗಳು.
ನನ್ನ ಮೇಲೆ ನಂಬಿಕೆ ಇಟ್ಟು ಸಚಿವರಾಗಿ ರಾಜ್ಯದ ಜನತೆಯ ಸೇವೆ ಮಾಡುವ ಅವಕಾಶ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಡಿಯೂರಪ್ಪ ನವರಿಗೆ ಹಾಗೂ ಕೇಂದ್ರದ ನಾಯಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೆನೆ ಎಂದಿದ್ದಾರೆ. ಅದರಂತೆ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ೧೦ ಶಾಸಕರಿಗೆ ಸಚೀವ ಸ್ಥಾನದ ಸುಯೋಗ ಒದಗಿ ಬಂದಿದೆ.
More Stories
ಭಟ್ಕಳ ಕರಾವಳಿ ಕಾವಲು ಪೊಲೀಸ್ ಠಾಣೆಯವರು ನಡೆಸಿದ ಅಣಕು ಕಾರ್ಯಾಚರಣೆಯಲ್ಲಿ ಆರು ಜನ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿ
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.