April 20, 2024

Bhavana Tv

Its Your Channel

ಅಪ್ಪಾಜಿಗೌಡ ಹುಟ್ಟುಹಬ್ಬ ಪ್ರಯುಕ್ತ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ನಾಗಮಂಗಲ .ಮಂಡ್ಯ ಜಿಲ್ಲೆಯ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಹುಟ್ಟುಹಬ್ಬವನ್ನು ಮಣ್ಣಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಕಲ್ಲದೇವನಹಳ್ಳಿ ಶಿವ ನಂಜೇಗೌಡರು ಹಾಗೂ ಅಭಿಮಾನಿಗಳು ಕಾರ್ಯಕರ್ತರು ಇಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಆಸ್ಪತ್ರೆ ಆಡಳಿತ ಮಂಡಳಿ ಸಿಬ್ಬಂದಿ ವರ್ಗದವರಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು

ನಾಗಮAಗಲ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾದ ಡಿ.ಟಿ. ಶ್ರೀನಿವಾಸಯ್ಯ ಮಾತನಾಡಿ ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿಗೌಡ ರವರು ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವುದರ ಮೂಲಕ ಬೇಗ ಗುಣಮುಖರಾಗಲಿ ಎಂದು ಹಾರೈಸಲಾಯಿತು. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಚುನಾವಣೆಯನ್ನು ಅಪ್ಪಾಜಿಗೌಡರು ಸ್ಪರ್ಧಿಸಿದ್ದು ನಾಳೆ ಬರುವಂತಹ ಫಲಿತಾಂಶದಲ್ಲಿ ಅತಿ ಹೆಚ್ಚು ಮತಗಳ ಅಂತರದಿAದ ಗೆಲುವು ಸಾಧಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳಲಾಯಿತು ಎಂದರು

ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ಮಲ್ಲೇನಹಳ್ಳಿ ಚನ್ನಪ್ಪ ದಲಿತ ಮುಖಂಡರಾದ ಶಿವರಾಮಯ್ಯ. ಕಂಚಿನಕೋಟೆ ಮೂರ್ತಿ. ಕಲ್ಲದೇವನಹಳ್ಳಿ ವಿನೋದರಾಜ್. ದಿಲೀಪ್.ಚಾಕಟಹಳ್ಳಿ ಶ್ರೀಕಾಂತ್ ಶಶಿಕಾಂತ್ ಮತ್ತು ಅಭಿಮಾನಿಗಳು ಭಾಗವಹಿಸಿದ್ದರು
ವರದಿ: ಚಂದ್ರಮೌಳಿ ನಾಗಮಂಗಲ

error: