
ಉಡುಪಿ ; ಕರೋನಾ ಮಹಾಮಾರಿ ತಡೆಗಟ್ಟಲು ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ನೆ ಜಾರಿಯಾಲ್ಲಿದ್ದು ಅದರಂತೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿಕೊಂಡಿದ್ದಾರೆ.
ಸಣ್ಣಪುಟ್ಟ ಕಾರಣಕ್ಕೆ ಅನುಮತಿ ಪತ್ರ ಕೋರಿ ಪ್ರತಿದಿನ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸರ್ಕಾರದ ಆದೇಶ ಉಲ್ಲಂಘನೆ ಯಾಗುತ್ತಿದೆ.
ಆದ್ದರಿಂದ ಸಾರ್ವಜನಿಕರು ಉಡುಪಿ ಜಿಲ್ಲಾಧಿಕಾರಿ ಅನುಮತಿ ಪಡೆಯಲು ಎಪ್ರಿಲ್ 14ರವರೆಗೆ ಬರುವುದನ್ನು ನಿಷೇಧಿಸಲಾಗಿದೆ. ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳುವ ವೈದ್ಯಕೀಯ ಧೃಡಿಕರಣ ಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದ್ದು ಇದರ ಹೊರತು ಬೇರೆ ಯಾವುದೇ ಅನುಮತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು