![](https://kannada.bhavanatv.com/wp-content/uploads/2020/03/vlcsnap-2020-03-27-10h41m38s059.png?v=1585285919)
ಕಾರವಾರ: ತಾಲೂಕಿನ ಪತಂಜಲಿ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ವೈರಸ್ ಸೋಂಕಿತ ನಾಲ್ವರು ಗುಣಮುಖರಾಗಿದ್ದು ಇಂದು ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಭಟ್ಕಳ ಮೂಲದ ಎಂಟು ಜನರಲ್ಲಿ ಕೊರೋನಾ ಸೋಂಕು ದೃಢ ಪಟ್ಟ ತಕ್ಷಣ ಜಿಲ್ಲಾಡಳಿತ ಅವರನ್ನ ಭಟ್ಕಳ ತಾಲೂಕು ಆಸ್ಪತ್ರೆಯಿಂದ ಕಾರವಾರ ತಾಲೂಕಿನ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಮುಂದಾಗಿತ್ತು.
ಎಂಟು ಜನ ಸೋಂಕಿತರಲ್ಲಿ ಈಗಾಗಲೇ ಚಿಕಿತ್ಸೆ ಪಡೆದು ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಇಂದು ಮತ್ತೆ ನಾಲ್ವರು ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಳಿದ ಇಬ್ಬರು ಸಹ ಒಂದೆರಡು ದಿನದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.
ಇತ್ತಿಚ್ಚಿಗೆ ಕೊರೋನಾ ಪತ್ತೆಯಾದ ಗರ್ಭಿಣಿ ಮಹಿಳೆಗೆ ಉಡುಪಿಯಲ್ಲಿ ಚಿಕಿತ್ಸೆ ಕೊಡುತ್ತಿರುವುದರಿಂದ ಜಿಲ್ಲೆಯಲ್ಲಿರುವ ಬಹುತೇಖ ಕೊರೋನಾ ಸೋಂಕಿತರು ಗುಣಮುಖರಾಗಿದ್ದು ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.
ವರದಿ : ಮಂಜು ಮುಟ್ಟಳ್ಳಿ
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.