
ಭಟ್ಕಳ: ರಾಜ್ಯದಲ್ಲಿ ಯಾವುದೇ ರೀತಿಯ ಸಂಕಷ್ಟ ಎದುರಾದಾಗ ಸದಾ ಸ್ಪಂದಿಸುವ ರಾಜ್ಯದ ಪ್ರತಿಷ್ಟಿತ ಅರ್ಬನ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್, ಕೊರೊನಾ ವೈರಸ್ ಸೋಂಕಿನಿoದ ಎದುರಾದ ಸಂಕಷ್ಟಕ್ಕೆ ಸ್ಪಂದಿಸಿದ್ದು, ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಎರಡು ಲಕ್ಷ ರೂಪಾಯಿಗಳನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಮೂಲಕ ನೀಡಿ ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ.
ಈಗಾಗಲೇ ಕೇಂದ್ರ ಸರಕಾರ ಘೋಷಿಸಿದ ಲಾಕ್ಡೌನ್ನಿಂದ ನಾಗರೀಕರು ತೊಂದರೆಗೊಳಗಾಗಿದ್ದನ್ನು ಮನಗಂಡ ಬ್ಯಾಂಕ್ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಬ್ಯಾಂಕಿನ ನಿರ್ದೇಶಕರುಗಳ ಮೂಲಕ ಜೀವನಾವಶ್ಯಕ ವಸ್ತುಗಳುಳ್ಳ ೩೫೫ ಫುಡ್ಕಿಟ್ಗಳನ್ನು ವಿತರಿಸುವ ಮೂಲಕ ಜನ ಸಾಮಾನ್ಯರೊಂದಿಗೆ ತಾವಿದ್ದೇವೆ ಎನ್ನುವ ಸಂದೇಶ ಸಾರಿದೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.