![](https://kannada.bhavanatv.com/wp-content/uploads/2020/04/WhatsApp-Image-2020-04-18-at-7.20.47-AM.jpeg?v=1587233179)
ಭಟ್ಕಳ ತಾಲ್ಲೂಕಿನಲ್ಲಿ ಕೊಂಕಣಿ ಖಾರ್ವಿ ಸಮಾಜದಲ್ಲಿ ವಾಸಿಸುತ್ತಿರುವ ಸಮಾಜ ಬಂಧುಗಳ ಪ್ರತಿಯೊಂದು ಕುಟುಂಬಗಳಿಗೆ ಲಾಕಡೌನ ಈ ಸಂಕಷ್ಟ ಸಂಧರ್ಭದಲ್ಲಿ ಕೊಂಕಣಿಖಾರ್ವಿ ಸಮಿತಿ ಭಟ್ಕಳ ರವರಿಂದ ಸುಮಾರು ಮೂರು ಸಾವಿರ ರೂಪಾಯಿಗಳ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ೫೦ ಕೆ.ಜಿ ಅಕ್ಕಿ ಸೇರಿದಂತೆ ನಿತ್ಯ ಬಳಕೆಯ ಅವಶ್ಯ ಸಾಮಾಗ್ರಿಗಳ ಕಿಟ್ ಪ್ರತಿಯೊಂದು ಕುಟುಂಬಗಳಿಗೂ ನೀಡಲಾಗಿದೆ. ಭಟ್ಕಳ ಬಂದರಿನ ಮಾವಿನಕುರ್ವೆ,ಬೆಳ್ನಿ, ಕರಿಕಲ್,ತಲಗೋಡ ಹಾಗೂ ಇನ್ನಿತರ ಪ್ರದೇಶದಲ್ಲಿ ವಾಸಿಸುವ ೪೫೫ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.
ಅಲ್ಲದೇ ಭಟ್ಕಳ ತಾಲ್ಲೂಕಿನ ಬೈಲೂರು ಭಾಗದಲ್ಲಿ ವಾಸಿಸುವ ಸುಮಾರು ೨೫ ಕುಟುಂಬಗಳಿಗೆ ಸುಮಾರು ಎರಡು ಸಾವಿರ ರೂಪಾಯಿಗಳ ೨೫ ಕೆಜಿ ಅಕ್ಕಿ ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ. ಸಮಾಜ ಬಂಧುಗಳು ತೀವ್ರ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಭಟ್ಕಳದ ಸಮಾಜದ ಸಮಿತಿಯ ಸ್ಪಂದನೆಗೆ ಕೊಂಕಣಿ ಖಾರ್ವಿ ಸಮಾಜದ ಹಿರಿಯ ಮುಖಂಡರು ಹಾಗೂ ಸಂಘದ ಪ್ರತಿನಿಧಿಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.