
ಭಟ್ಕಳ: ತಾಲೂಕಿನಲ್ಲಿ ಅರ್ಹರಿಗೆ ದಿನಸಿ ಹಾಗೂ ತರಕಾರಿಯ ಕಿಟ್ ವಿತರಿಸುತ್ತಿರುವ ಜಮಾತೆ ಇಸ್ಲಾಮಿ ಹಿಂದ್ ಹಾಗೂ ಎಚ್.ಆರ್.ಎಸ್. ವೆಂಕಟಾಪುರದ ಕೆಲವು ಮನೆಗಳಿಗೆ ತೆರಳಿ ಜೀವನಾವಶ್ಯಕ ವಸ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಮಾತೆ ಇಸ್ಲಾಮಿ ಹಿಂದ್ನ ಮೌಲಾನಾ ಮೊಹಮ್ಮದ್ ಜುಬೇರ್ ಅವರು ನಾವೆಲ್ಲರೂ ಒಂದೇ, ಒಬ್ಬರು ಸಂಕಷ್ಟದಲ್ಲಿರುವಾಗ ಅವರಿಗೆ ಸಹಾಯ ಮಾಡುವುದು ಮಾನವ ಧರ್ಮವಾಗಿದ್ದು ದೇಶದೆಲ್ಲೆಡೆ ಕೋವಿಡ್-೧೯ರಿಂದಾಗಿ ಲಾಲ್ಡೌನ್ ಆಗಿದ್ದು ಜನರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಬಡವ ಬಲ್ಲಿದ ಎನ್ನುವ ಬೇಧಭಾವ ಕೂಡಾ ಇಲ್ಲದೇ ಎಲ್ಲರಿಗೂ ತೊಂದರೆಯಾಗಿದೆ. ಈ ಭಾಗದ ಜನರು ಕೂಡಾ ಸಂಕಷ್ಟದಲ್ಲಿದ್ದು ಅವರ ಸಹಾಯಕ್ಕೆ ನಾವಿದ್ದೇವೆ ಎನ್ನುವುದನ್ನು ತಿಳಿಸಲು ಇಲ್ಲಿಗೆ ಬಂದಿದ್ದೇವೆ. ಎಲ್ಲರೂ ಕೂಡಾ ಕೋವಿಡ್-೧೯ರ ನಿಯಮ ಪಾಲಿಸಿ, ಮನೆಯಲ್ಲಿಯೇ ಸುರಕ್ಷಿತವಾಗಿರಿ, ಯಾವುದೇ ಕಾರಣಕ್ಕೂ ಹೊರಗಡೆ ಬಂದು ಸಂಕಷ್ಟಕ್ಕೆ ಸಿಲುಕದಿರಿ ಎನ್ನುವ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಸದಸ್ಯ ಎಂ. ಆರ್. ಮಾನ್ವಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಜಾಲಿ ಪಟ್ಟಣ ಪಂಚಾಯತ್ ಸದಸ್ಯ ಅಬ್ದುಲ್ ರಹೀಂ, ಜಾಲಿ ಪಟ್ಟಣ ಪಂಚಾಯತ್ ಸದಸ್ಯ ಮಂಗಳ ಗೊಂಡ, ಎಚ್.ಆರ್.ಎಸ್.ನ ಖಮರುದ್ದೀನ್ ಮುಷಾಯಿಕ್ ಮುಂತಾದವರು ಉಪಸ್ಥಿತರಿದ್ದರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು