
ಲಾಕ್ ಡೌನಿನಿಂದಾಗಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಬದುಕು ಸಾಗಿಸಲು ಕಷ್ಟಪಡುತ್ತಿದ್ದರು. ಇದನ್ನು ಮನಗಂಡ ಹೊನ್ನಾವರದ ರೋಟರಿ ಕ್ಲಬ್ಬು ಇಂತಹ 125 ಕಾರ್ಮಿಕರ ಕುಟುಂಬಗಳಿಗೆ ದಿನಸಿ ಸಾಮಾನುಗಳ ಪೊಟ್ಟಣಗಳನ್ನು ಇತ್ತೀಚೆಗೆ ವಿತರಿಸಿತು. ಚಾಂದ್ರಾಣಿಯಲ್ಲಿ 110 ಕುಟುಂಬಗಳಿಗೆ, ಆರೊಳ್ಳಿಯ 10 ಕುಟುಂಬಗಳಿಗೆ ಮತ್ತು ಮೂರುಕಟ್ಟೆಯ 5 ಕುಟುಂಬಗಳಿಗೆ ತಲಾ 400 ರೂಪಾಯಿ ಮೌಲ್ಯದ ದಿನಸಿ ಸಾಮಾನುಗಳ ಪೊಟ್ಟಣಗಳನ್ನು ವಿತರಿಸಲಾಯಿತು.
ಕ್ಲಬ್ಬಿನ ಬಹುತೇಕ ಸದಸ್ಯರು ಅಧ್ಯಕ್ಷ – ಕಾರ್ಯದರ್ಶಿಗಳೊಂದಿಗೆ ಈ ಸೇವಾಕಾರ್ಯದಲ್ಲಿ ಕೈ ಜೋಡಿಸಿದ್ದರು. ಅಲ್ಲದೇ ವಿತರಣೆ ಸಂದರ್ಭದಲ್ಲಿ ಹಾಜರಿದ್ದು ಸಹಕರಿಸಿದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.