
ಯೋಧರು ಗಡಿಯಲ್ಲಿ ನಿಂತು ದೇಶ ರಕ್ಷಣೆಗಾಗಿ ತೊಡಗಿರುವಮತೆ ಕರೋನಾ ಸೋಂಕು ಇಂದು ವಿಶ್ವದೆಲ್ಲಡೆ ಮಾರಕವಾಗಿರುವಾಗ ಆರೊಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿಗಳು ಕರೋನಾ ವಾರಿಯರ್ಸ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಮ್ಮ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕುಮುಟಾ ಹೊನ್ನಾವರ ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯಪಟ್ಟರು.
ತಾಲೂಕಿನ ಸಾಲ್ಕೋಡ್, ಕಡ್ಲೆ, ಹೊಸಾಕುಳಿ, ಮುಗ್ವಾ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಮಾಜಿ ಶಾಸಕಿ ಗುರುವಾರ ದಿನಬಳಕೆ ಸಾಮಗ್ರಿಗಳ ಕಿಟ್ ವಿತರಿಸಿದರು.
೪ ಗ್ರಾಮದ ೨೭ ಆಶಾ ಕಾರ್ಯಕರ್ತೆಯರು, ೧೦ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ೩೩ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದರು.
ಕೊರೋನಾ ತಡೆಗೆ ಜಾರಿಯಾದ ಲಾಕ್ ಡೌನ್ನಿಂದ ಎಲ್ಲರೂ ಗೃಹಬಂಧನದಲ್ಲಿದ್ದರೆ, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮಾತ್ರ ತಮ್ಮ ಜೀವದ ಹಂಗನ್ನು ತೊರೆದು ಸಾರ್ವಜನಿಕರಲ್ಲಿ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಜನ ಸಾಮಾನ್ಯರ ಆರೋಗ್ಯ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವ ಮೂಲಕ ಕೊರೋನಾ ವಿರುದ್ಧ ಸೈನಿಕರಂತೆ ಹೋರಾಡುತ್ತಿದ್ದಾರೆ. ಈ ಕೊರೋನಾ ಸೈನಿಕರಿಗೆ ನೆರವು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ದಿವಂಗತ ಮೋಹನ ಕೆ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಸುಮಾರು ೭೦ಕ್ಕೂ ಅಧಿಕ ಕೊರೋನಾ ಸೈನಿಕರಿಗೆ ದಿನ ಬಳಕೆ ಸಾಮಗ್ರಿಗಳ ಕಿಟ್ ವಿತರಿಸಿದರು. ಈ ಮೂಲಕ ಕೊರೋನಾ ಸೈನಿಕರನ್ನು ಅಭಿನಂದಿಸಿ, ಪ್ರೋತ್ಸಾಹಿಸುವ ಕಾರ್ಯ ಮಾಡಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಸಂತೋಷ, ಕಾಂಗ್ರೇಸ್ ಮುಖಂಡರಾದ ರವಿಕುಮಾರ ಶೆಟ್ಟಿ, ವಿನಾಯಕ ಶೇಟ್ ಹಳದೀಪುರ, ಸಂದೇಶ ಶೆಟ್ಟಿ, ಗಜಾನನ ನಾಯ್ಕ, ಪರಮೇಶ್ವರ ನಾಯ್ಕ, ಸಂತೋಷ ವಿನೋದ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು